ದೇಶದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ಅವಹೇಳನ ಮಾಡಿರುವ ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕೆಂದು ಸರ್ಕಾರದ ಪ್ರತಿನಿಧಿಗಳು ಪಟ್ಟುಹಿಡಿದರೆ, ವಿದೇಶಗಳ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಈ ಹಿಂದೆ ನೀಡಿರುವ ನಿರ್ದಿಷ್ಟ ಹೇಳಿಕೆಗಳನ್ನು ಪ್ರತಿಪಕ್ಷಗಳು ಗುರಾಣಿಯಾಗಿ ಉಲ್ಲೇಖಿಸಿ, ಸರ್ಕಾರದ ವಿರುದ್ಧ ನಿನ್ನೆ ಪ್ರತಿದಾಳಿ ನಡೆಸಿದ್ದವು.