ಈ ಮಧ್ಯೆ, ರಾಜಕೀಯ ಕಾರಣಕ್ಕಾಗಿ ತಮ್ಮನ್ನು ಸಭೆಗೆ ಹಾಜರಾಗದಂತೆ ಸೂಚಿಸಲಾಗಿದೆ ಎಂದು ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆರೋಪಿಸಿದ್ದಾರೆ. ಸಂಸದರು, ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಭಾಗವಹಿಸುವಂತೆ ತಮ್ಮನ್ನು ಆಹ್ವಾನಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಸಭೆಗೆ ಹಾಜರಾಗುವ ಅಗತ್ಯವಿಲ್ಲ ಎಂಬ ಸಂದೇಶ ಬಂದಿದೆ ಎಂದು ಅವರು ಹೇಳಿದ್ದಾರೆ.