<p><strong>ನವದೆಹಲಿ:</strong> ಬಿಹಾರದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿ ಪದ ಪ್ರಯೋಗ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. </p><p>ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯ ವಿರುದ್ಧವೂ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ. </p><p>ಈ ಸಂಬಂಧ ಬಿಜೆಪಿ ಪಕ್ಷದ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. </p><p>ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರ ಅರಿವಿನೊಂದಿಗೆ ಇವೆಲ್ಲವೂ ನಡೆಯುತ್ತಿದೆ. ಇಷ್ಟು ಕೀಳುಮಟ್ಟದ ರಾಜಕೀಯ ಹಿಂದೆಂದೂ ಕಂಡಿರಲಿಲ್ಲ. ಈ ಯಾತ್ರೆಯಲ್ಲಿ ದ್ವೇಷ ರಾಜಕೀಯ ಎಲ್ಲ ಮಿತಿಗಳನ್ನು ಮೀರಿದೆ ಎಂದು ಹೇಳಿದೆ. </p><p>ಬಿಹಾರವನ್ನು ಅವಮಾನಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರನ್ನು ಆಹ್ವಾನಿಸುವ ಮೂಲಕ ಬಿಹಾರದ ಜನತೆಗೆ ಅವಮಾನ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. </p><p>ಇವೆಲ್ಲವನ್ನು ಬಿಹಾರದ ಜನತೆ ಎಂದಿಗೂ ಮರೆಯುವುದಿಲ್ಲ. ಸಾವಿರ ಬಾರಿ ಕ್ಷಮೆಯಾಚಿಸಿದರೂ ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದೆ. </p> .ವೈಯಕ್ತಿಕ ತೇಜೋವಧೆ ಮಾಡುವುದು RSS ಗುಣ; ಗಾಂಧಿಯನ್ನೂ ಬಿಡಲಿಲ್ಲ: ರಾಹುಲ್ ಗಾಂಧಿ.ಮತದಾರರ ಅಧಿಕಾರ ಯಾತ್ರೆ: ರಾಹುಲ್ ಜೊತೆ ಸೇರಿಕೊಂಡ ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿ ಪದ ಪ್ರಯೋಗ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. </p><p>ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯ ವಿರುದ್ಧವೂ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ. </p><p>ಈ ಸಂಬಂಧ ಬಿಜೆಪಿ ಪಕ್ಷದ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. </p><p>ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರ ಅರಿವಿನೊಂದಿಗೆ ಇವೆಲ್ಲವೂ ನಡೆಯುತ್ತಿದೆ. ಇಷ್ಟು ಕೀಳುಮಟ್ಟದ ರಾಜಕೀಯ ಹಿಂದೆಂದೂ ಕಂಡಿರಲಿಲ್ಲ. ಈ ಯಾತ್ರೆಯಲ್ಲಿ ದ್ವೇಷ ರಾಜಕೀಯ ಎಲ್ಲ ಮಿತಿಗಳನ್ನು ಮೀರಿದೆ ಎಂದು ಹೇಳಿದೆ. </p><p>ಬಿಹಾರವನ್ನು ಅವಮಾನಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರನ್ನು ಆಹ್ವಾನಿಸುವ ಮೂಲಕ ಬಿಹಾರದ ಜನತೆಗೆ ಅವಮಾನ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. </p><p>ಇವೆಲ್ಲವನ್ನು ಬಿಹಾರದ ಜನತೆ ಎಂದಿಗೂ ಮರೆಯುವುದಿಲ್ಲ. ಸಾವಿರ ಬಾರಿ ಕ್ಷಮೆಯಾಚಿಸಿದರೂ ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದೆ. </p> .ವೈಯಕ್ತಿಕ ತೇಜೋವಧೆ ಮಾಡುವುದು RSS ಗುಣ; ಗಾಂಧಿಯನ್ನೂ ಬಿಡಲಿಲ್ಲ: ರಾಹುಲ್ ಗಾಂಧಿ.ಮತದಾರರ ಅಧಿಕಾರ ಯಾತ್ರೆ: ರಾಹುಲ್ ಜೊತೆ ಸೇರಿಕೊಂಡ ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>