<p><strong>ಮುಂಬೈ</strong>: ‘ಸತಾರಾ ಜಿಲ್ಲೆಯ ಫಲ್ಟನ್ನಲ್ಲಿ 28 ವರ್ಷದ ವೈದ್ಯೆಯ ಆತ್ಮಹತ್ಯೆಯು ‘ಸಾಂಸ್ಥಿಕ ಕೊಲೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ಈ ಘಟನೆಯು ಬಿಜೆಪಿ ಸರ್ಕಾರದ ಅಮಾನವೀಯ ಮತ್ತು ಸಂವೇದನಾರಹಿತ ಮುಖವನ್ನು ಬಹಿರಂಗಪಡಿಸುತ್ತದೆ. ಅತ್ಯಾಚಾರ ಮತ್ತು ಕಿರುಕುಳದಿಂದ ವೈದ್ಯೆಯು ಹತಾಶೆಗೆ ಒಳಗಾಗಿರುವುದು ಯಾವುದೇ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನು ಅಲುಗಾಡಿಸುವಂತಹ ದುರಂತವಾಗಿದೆ’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ. </p>.<p>‘ಇತರರ ನೋವನ್ನು ನಿವಾರಿಸಲು ಹಾತೊರೆಯುತ್ತಿದ್ದ ಭರವಸೆಯ ವೈದ್ಯೆಯೊಬ್ಬರು ಭ್ರಷ್ಟ ವ್ಯವಸ್ಥೆ ಮತ್ತು ಅಧಿಕಾರ ವ್ಯವಸ್ಥೆಯೊಂದಿಗೆ ಬೇರೂರಿರುವ ದುಷ್ಕರ್ಮಿಗಳ ಕಿರುಕುಳಕ್ಕೆ ಬಲಿಯಾಗಿದ್ದಾರೆ. ದುಷ್ಕರ್ಮಿಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕಾರ್ಯವನ್ನು ಮಾಡದ ಅಧಿಕಾರ ವ್ಯವಸ್ಥೆಯೇ ಈ ಮುಗ್ಧ ಮಹಿಳೆಯ ಮೇಲೆ ಅತ್ಯಂತ ಘೋರ ಅಪರಾಧವನ್ನು ಎಸಗಿದೆ’ ಎಂದು ಆರೋಪಿಸಿದ್ದಾರೆ. </p>.<p>‘ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಕೆಲ ಪ್ರಭಾವಿಗಳು ಕೂಡ ವೈದ್ಯೆ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ’ ಎಂದು ರಾಹುಲ್ ಗಾಂಧಿ ಅವರು ದೇವೇಂದ್ರ ಫಡಣವೀಸ್ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>‘ಇದು ಆತ್ಮಹತ್ಯೆಯಲ್ಲ, ಸಾಂಸ್ಥಿಕ ಕೊಲೆ. ಅಧಿಕಾರವು ದುಷ್ಕರ್ಮಿಗಳಿಗೆ ಗುರಾಣಿಯಾದಾಗ ಯಾರಿಂದ ನ್ಯಾಯವನ್ನು ನಿರೀಕ್ಷಿಸಬಹುದು? ಸಂತ್ರಸ್ತೆಯ ಕುಟುಂಬದೊಂದಿಗೆ ಕಾಂಗ್ರೆಸ್ ನಿಲ್ಲುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಸತಾರಾ ಜಿಲ್ಲೆಯ ಫಲ್ಟನ್ನಲ್ಲಿ 28 ವರ್ಷದ ವೈದ್ಯೆಯ ಆತ್ಮಹತ್ಯೆಯು ‘ಸಾಂಸ್ಥಿಕ ಕೊಲೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ಈ ಘಟನೆಯು ಬಿಜೆಪಿ ಸರ್ಕಾರದ ಅಮಾನವೀಯ ಮತ್ತು ಸಂವೇದನಾರಹಿತ ಮುಖವನ್ನು ಬಹಿರಂಗಪಡಿಸುತ್ತದೆ. ಅತ್ಯಾಚಾರ ಮತ್ತು ಕಿರುಕುಳದಿಂದ ವೈದ್ಯೆಯು ಹತಾಶೆಗೆ ಒಳಗಾಗಿರುವುದು ಯಾವುದೇ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನು ಅಲುಗಾಡಿಸುವಂತಹ ದುರಂತವಾಗಿದೆ’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ. </p>.<p>‘ಇತರರ ನೋವನ್ನು ನಿವಾರಿಸಲು ಹಾತೊರೆಯುತ್ತಿದ್ದ ಭರವಸೆಯ ವೈದ್ಯೆಯೊಬ್ಬರು ಭ್ರಷ್ಟ ವ್ಯವಸ್ಥೆ ಮತ್ತು ಅಧಿಕಾರ ವ್ಯವಸ್ಥೆಯೊಂದಿಗೆ ಬೇರೂರಿರುವ ದುಷ್ಕರ್ಮಿಗಳ ಕಿರುಕುಳಕ್ಕೆ ಬಲಿಯಾಗಿದ್ದಾರೆ. ದುಷ್ಕರ್ಮಿಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕಾರ್ಯವನ್ನು ಮಾಡದ ಅಧಿಕಾರ ವ್ಯವಸ್ಥೆಯೇ ಈ ಮುಗ್ಧ ಮಹಿಳೆಯ ಮೇಲೆ ಅತ್ಯಂತ ಘೋರ ಅಪರಾಧವನ್ನು ಎಸಗಿದೆ’ ಎಂದು ಆರೋಪಿಸಿದ್ದಾರೆ. </p>.<p>‘ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಕೆಲ ಪ್ರಭಾವಿಗಳು ಕೂಡ ವೈದ್ಯೆ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ’ ಎಂದು ರಾಹುಲ್ ಗಾಂಧಿ ಅವರು ದೇವೇಂದ್ರ ಫಡಣವೀಸ್ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>‘ಇದು ಆತ್ಮಹತ್ಯೆಯಲ್ಲ, ಸಾಂಸ್ಥಿಕ ಕೊಲೆ. ಅಧಿಕಾರವು ದುಷ್ಕರ್ಮಿಗಳಿಗೆ ಗುರಾಣಿಯಾದಾಗ ಯಾರಿಂದ ನ್ಯಾಯವನ್ನು ನಿರೀಕ್ಷಿಸಬಹುದು? ಸಂತ್ರಸ್ತೆಯ ಕುಟುಂಬದೊಂದಿಗೆ ಕಾಂಗ್ರೆಸ್ ನಿಲ್ಲುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>