<p><strong>ನವದೆಹಲಿ:</strong> ಸಂಸತ್ ಭವನಕ್ಕೆ ಪ್ರವೇಶಿಸದಂತೆ ಬಿಜೆಪಿ ಸಂಸದರು ತಮ್ಮನ್ನು ಹಾಗೂ ವಿರೋಧ ಪಕ್ಷಗಳ ಸಂಸದರನ್ನು ತಡೆದರು, ತಳ್ಳಿದರು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.ಅಂಬೇಡ್ಕರ್ಗೆ ಅವಮಾನ ಮಾಡಿದರೆ ದೇಶ ಸಹಿಸಲ್ಲ: ಅಮಿತ್ ಶಾಗೆ ರಾಹುಲ್ ಗಾಂಧಿ.<p>ಬಿಜೆಪಿ ಸದಸ್ಯರೊಬ್ಬರನ್ನು ರಾಹುಲ್ ಗಾಂಧಿ ತಳ್ಳಿದ್ದಾರೆ, ಅವರು ಬಿಜೆಪಿಯ ಮತ್ತೊಬ್ಬ ಸಂಸದ ಪ್ರತಾಪ್ ಸಾರಂಗಿ ಮೇಲೆ ಬಿದ್ದಿದ್ದಾರೆ. ಇದರಿಂದ ಸಾರಂಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.</p><p>‘ನಾನು ಸಂಸತ್ ಭವನಕ್ಕೆ ಪ್ರವೇಶಿಸುತ್ತಿದ್ದೆ. ಈ ವೇಳೆ ಬಿಜೆಪಿ ಸದಸ್ಯರು ನನ್ನನ್ನು ತಡೆದಿದ್ದಾರೆ, ತಳ್ಳಿದ್ದಾರೆ ಹಾಗೂ ಬೆದರಿಕೆ ಹಾಕಿದ್ದಾರೆ’ ಎಂದು ರಾಹುಲ್ ಗಾಂಧಿ ಸಂಸತ್ ಭವನದ ಮಕರ ದ್ವಾರದ ಬಳಿ ಪತ್ರಕರ್ತರೊಂದಿಗೆ ಹೇಳಿದ್ದಾರೆ.</p>.ಸಂಸತ್ ಬಳಿ ಇಂಡಿಯಾ-ಎನ್ಡಿಎ ಪ್ರತಿಭಟನೆ: ರಾಹುಲ್ ತಳ್ಳಿದರು; ಗಾಯಗೊಂಡ BJP ಸಂಸದ.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ತಳ್ಳಲಾಗಿದೆಯೇ ಎನ್ನುವ ಪ್ರಶ್ನೆಗೆ ‘ಅದು ನಡೆದಿದೆ. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p><p>‘ಇದು ಸಂಸತ್ನ ಪ್ರವೇಶ ದ್ವಾರ. ಒಳಗೆ ಹೋಗುವ ಹಕ್ಕು ನಮಗೆ ಇದೆ. ಒಳಗೆ ಹೋಗದಂತೆ ಬಿಜೆಪಿ ಸಂಸದರನ್ನು ನಮ್ಮನ್ನು ತಡೆದರು’ ಎಂದು ಮಕರ ದ್ವಾರವನ್ನು ತೋರಿಸುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.</p>.ಅಂಬೇಡ್ಕರ್ಗೆ ಅಪಮಾನ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಖರ್ಗೆ.<p>‘ಅವರು ಸಂವಿಧಾನ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುತ್ತಿದ್ದಾರೆ’ ಎಂದು ರಾಹುಲ್ ಗಾಂಧಿ ಇದೇ ವೇಳೆ ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ‘ಇಂಡಿಯಾ’ ಬಣದ ಹಲವು ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಸಂಸದರು ಪರಸ್ಪರ ಘೋಷಣೆಗಳನ್ನು ಕೂಗಿಕೊಂಡು ಮುಖಾಮುಖಿಯಾಗಿದ್ದಾರೆ.</p>.ಗಾಯಾಳು ಬಿಜೆಪಿ ಸಂಸದರನ್ನು ಭೇಟಿಯಾದ ಶಿವರಾಜ್ ಸಿಂಗ್,ಜೋಶಿ: ಕರಾಳ ದಿನ ಎಂದ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ ಭವನಕ್ಕೆ ಪ್ರವೇಶಿಸದಂತೆ ಬಿಜೆಪಿ ಸಂಸದರು ತಮ್ಮನ್ನು ಹಾಗೂ ವಿರೋಧ ಪಕ್ಷಗಳ ಸಂಸದರನ್ನು ತಡೆದರು, ತಳ್ಳಿದರು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.ಅಂಬೇಡ್ಕರ್ಗೆ ಅವಮಾನ ಮಾಡಿದರೆ ದೇಶ ಸಹಿಸಲ್ಲ: ಅಮಿತ್ ಶಾಗೆ ರಾಹುಲ್ ಗಾಂಧಿ.<p>ಬಿಜೆಪಿ ಸದಸ್ಯರೊಬ್ಬರನ್ನು ರಾಹುಲ್ ಗಾಂಧಿ ತಳ್ಳಿದ್ದಾರೆ, ಅವರು ಬಿಜೆಪಿಯ ಮತ್ತೊಬ್ಬ ಸಂಸದ ಪ್ರತಾಪ್ ಸಾರಂಗಿ ಮೇಲೆ ಬಿದ್ದಿದ್ದಾರೆ. ಇದರಿಂದ ಸಾರಂಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.</p><p>‘ನಾನು ಸಂಸತ್ ಭವನಕ್ಕೆ ಪ್ರವೇಶಿಸುತ್ತಿದ್ದೆ. ಈ ವೇಳೆ ಬಿಜೆಪಿ ಸದಸ್ಯರು ನನ್ನನ್ನು ತಡೆದಿದ್ದಾರೆ, ತಳ್ಳಿದ್ದಾರೆ ಹಾಗೂ ಬೆದರಿಕೆ ಹಾಕಿದ್ದಾರೆ’ ಎಂದು ರಾಹುಲ್ ಗಾಂಧಿ ಸಂಸತ್ ಭವನದ ಮಕರ ದ್ವಾರದ ಬಳಿ ಪತ್ರಕರ್ತರೊಂದಿಗೆ ಹೇಳಿದ್ದಾರೆ.</p>.ಸಂಸತ್ ಬಳಿ ಇಂಡಿಯಾ-ಎನ್ಡಿಎ ಪ್ರತಿಭಟನೆ: ರಾಹುಲ್ ತಳ್ಳಿದರು; ಗಾಯಗೊಂಡ BJP ಸಂಸದ.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ತಳ್ಳಲಾಗಿದೆಯೇ ಎನ್ನುವ ಪ್ರಶ್ನೆಗೆ ‘ಅದು ನಡೆದಿದೆ. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p><p>‘ಇದು ಸಂಸತ್ನ ಪ್ರವೇಶ ದ್ವಾರ. ಒಳಗೆ ಹೋಗುವ ಹಕ್ಕು ನಮಗೆ ಇದೆ. ಒಳಗೆ ಹೋಗದಂತೆ ಬಿಜೆಪಿ ಸಂಸದರನ್ನು ನಮ್ಮನ್ನು ತಡೆದರು’ ಎಂದು ಮಕರ ದ್ವಾರವನ್ನು ತೋರಿಸುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.</p>.ಅಂಬೇಡ್ಕರ್ಗೆ ಅಪಮಾನ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಖರ್ಗೆ.<p>‘ಅವರು ಸಂವಿಧಾನ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುತ್ತಿದ್ದಾರೆ’ ಎಂದು ರಾಹುಲ್ ಗಾಂಧಿ ಇದೇ ವೇಳೆ ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ‘ಇಂಡಿಯಾ’ ಬಣದ ಹಲವು ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಸಂಸದರು ಪರಸ್ಪರ ಘೋಷಣೆಗಳನ್ನು ಕೂಗಿಕೊಂಡು ಮುಖಾಮುಖಿಯಾಗಿದ್ದಾರೆ.</p>.ಗಾಯಾಳು ಬಿಜೆಪಿ ಸಂಸದರನ್ನು ಭೇಟಿಯಾದ ಶಿವರಾಜ್ ಸಿಂಗ್,ಜೋಶಿ: ಕರಾಳ ದಿನ ಎಂದ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>