<p><strong>ನವದೆಹಲಿ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಷಯದಲ್ಲಿ ಕಾಂಗ್ರೆಸ್ ರಾಜಕೀಯವಾಗಿ, ಸಂಘಟನಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. </p><p>ಎಸ್ಐಆರ್ ನಡೆಯುತ್ತಿರುವ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿನ ಎಐಸಿಸಿ ಸಭೆಯಲ್ಲಿ ರಾಹುಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. </p><p>'ಸ್ವಚ್ಛ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ' ಎಂದು ರಾಹುಲ್ ಪ್ರತಿಪಾದಿಸಿದ್ದಾರೆ. </p><p>'ಎಸ್ಐಆರ್ ಅನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಯತ್ನ ನಡೆಯುತ್ತಿದೆ. ಆ ಮೂಲಕ ನೈಜ ಮತದಾರರನ್ನು ಅಳಿಸುವ ಉದ್ದೇಶವನ್ನು ಹೊಂದಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p><p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. </p><p>ಮತಕಳ್ಳತನ ಬಗ್ಗೆ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ವರ್ತನೆಯು ತೀವ್ರ ನಿರಾಶಾದಾಯಕವಾಗಿದೆ ಎಂದಿದೆ. ಅಲ್ಲದೆ ಚುನಾವಣಾ ಆಯೋಗವು ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕಿದೆ' ಎಂದು ಒತ್ತಾಯಿಸಿದೆ. </p><p>243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೇರಿತ್ತು. ಮತ್ತೊಂದೆಡೆ ತೀವ್ರ ಹಿನ್ನಡೆ ಅನುಭವಿಸಿದ್ದ ಮಹಾಘಟಬಂಧನ ಮೈತ್ರಿಯು 35 ಸೀಟುಗಳನ್ನಷ್ಟೇ ಗೆದ್ದಿತ್ತು. </p>.ಬಿಜೆಪಿ ನೆರಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಆಯೋಗ ಸಾಬೀತುಪಡಿಸಲಿ: ಕಾಂಗ್ರೆಸ್.ತಾಂತ್ರಿಕವಾಗಿ ಅಸಾಧ್ಯ: RJD ನಾಯಕನ ಇವಿಎಂ ಅಕ್ರಮ ಆರೋಪಕ್ಕೆ ಆಯೋಗ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಷಯದಲ್ಲಿ ಕಾಂಗ್ರೆಸ್ ರಾಜಕೀಯವಾಗಿ, ಸಂಘಟನಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. </p><p>ಎಸ್ಐಆರ್ ನಡೆಯುತ್ತಿರುವ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿನ ಎಐಸಿಸಿ ಸಭೆಯಲ್ಲಿ ರಾಹುಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. </p><p>'ಸ್ವಚ್ಛ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ' ಎಂದು ರಾಹುಲ್ ಪ್ರತಿಪಾದಿಸಿದ್ದಾರೆ. </p><p>'ಎಸ್ಐಆರ್ ಅನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಯತ್ನ ನಡೆಯುತ್ತಿದೆ. ಆ ಮೂಲಕ ನೈಜ ಮತದಾರರನ್ನು ಅಳಿಸುವ ಉದ್ದೇಶವನ್ನು ಹೊಂದಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p><p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. </p><p>ಮತಕಳ್ಳತನ ಬಗ್ಗೆ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ವರ್ತನೆಯು ತೀವ್ರ ನಿರಾಶಾದಾಯಕವಾಗಿದೆ ಎಂದಿದೆ. ಅಲ್ಲದೆ ಚುನಾವಣಾ ಆಯೋಗವು ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕಿದೆ' ಎಂದು ಒತ್ತಾಯಿಸಿದೆ. </p><p>243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೇರಿತ್ತು. ಮತ್ತೊಂದೆಡೆ ತೀವ್ರ ಹಿನ್ನಡೆ ಅನುಭವಿಸಿದ್ದ ಮಹಾಘಟಬಂಧನ ಮೈತ್ರಿಯು 35 ಸೀಟುಗಳನ್ನಷ್ಟೇ ಗೆದ್ದಿತ್ತು. </p>.ಬಿಜೆಪಿ ನೆರಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಆಯೋಗ ಸಾಬೀತುಪಡಿಸಲಿ: ಕಾಂಗ್ರೆಸ್.ತಾಂತ್ರಿಕವಾಗಿ ಅಸಾಧ್ಯ: RJD ನಾಯಕನ ಇವಿಎಂ ಅಕ್ರಮ ಆರೋಪಕ್ಕೆ ಆಯೋಗ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>