<p><strong>ನವದೆಹಲಿ</strong>: ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ದೇಶದಾದ್ಯಂತ ಓಡಾಡುತ್ತಿದ್ದವರೇ, ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಬಿಜೆಪಿ ಟೀಕಿಸಿದೆ.</p><p>2022ರ ಭಾರತ್ ಜೋಡೊ ಯಾತ್ರೆ ವೇಳೆ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿತ್ತು.</p>.ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆ: ಇ.ಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ.ಆಪರೇಷನ್ ಸಿಂಧೂರ; ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿಗೆ ಸನ್ಮಾನ. <p>‘ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆಗಳನ್ನು ನೀಡುತ್ತಿರಲಿಲ್ಲ’ ಎಂದೂ ಸುಪ್ರೀಂ ಕೋರ್ಟ್ ಹೇಳಿತ್ತು.</p><p>ರಾಹುಲ್ ಗಾಂಧಿ ಉದ್ದೇಶಿಸಿ ಸುಪ್ರೀಂ ಕೋರ್ಟ್ ಹೇಳಿಕೆ ನೀಡಿದ್ದು, ಇದು ಅವರಿಗೆ ಗಂಭೀರ ಎಚ್ಚರಿಕೆಯಾಗಬೇಕು ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.</p><p>ನೀವು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಪ್ರಬುದ್ಧತೆಯ ನಡುವಳಿಕೆಯನ್ನು ತೋರಿಸಿ. ಒಬ್ಬ ಭಾರತೀಯ ಈ ರೀತಿ ಮಾತನಾಡಬಾರದು ಎಂದು ಸುಪ್ರೀಂ ಕೋರ್ಟ್ ಅವರಿಗೆ ಹೇಳುವುದಕ್ಕಿಂತ ದೊಡ್ಡ ಸಂದೇಶ ಇನ್ನೊಂದಿದೆಯೇ? ಎಂದು ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ ಏಳನೇ ದಿನದ ಶೋಧ ಆರಂಭ.ಸಾರಿಗೆ ನೌಕರರ ಮುಷ್ಕರ: ಹುಬ್ಬಳ್ಳಿಯಲ್ಲಿ ಬಸ್ಗೆ ಕಲ್ಲು ಎಸೆದ ಕಿಡಿಗೇಡಿಗಳು.<p>ಕಾಂಗ್ರೆಸ್ ನಾಯಕರು ಮತ್ತು ಅವರ ಕುಟುಂಬವು ಸಂವಿಧಾನವನ್ನು ಸ್ವಲ್ಪವಾದರೂ ಗೌರವಿಸಿದ್ದರೆ, ಸುಪ್ರೀಂ ಕೋರ್ಟ್ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸುವ ಅಗತ್ಯವಿರಲಿಲ್ಲ. ಅವರು ಸಾಂವಿಧಾನಿಕ ಮೌಲ್ಯಗಳ ಅತಿದೊಡ್ಡ ಉಲ್ಲಂಘನೆಗಾರರು ಎಂದು ಅವರು ಪ್ರಧಾನ್ ತಿಳಿಸಿದ್ದಾರೆ</p>.Photos | ಸಾರಿಗೆ ನೌಕರರ ಮುಷ್ಕರ: ಕಾದು ಕುಳಿತರೂ ಬರಲಿಲ್ಲ ಬಸ್.KSRTC Strike |ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ; ಜನಸಾಮಾನ್ಯರಿಗೆ ಪರದಾಟ: ಅಶೋಕ .ಬೀದರ್ | ಎಂದಿನಂತೆ ತೆಲಂಗಾಣ, ಮಹಾರಾಷ್ಟ್ರ ಬಸ್ಗಳ ಸಂಚಾರ.ಚಿಕ್ಕಮಗಳೂರು: ಆರು ಡಿಪೊಗಳ 560 ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ದೇಶದಾದ್ಯಂತ ಓಡಾಡುತ್ತಿದ್ದವರೇ, ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಬಿಜೆಪಿ ಟೀಕಿಸಿದೆ.</p><p>2022ರ ಭಾರತ್ ಜೋಡೊ ಯಾತ್ರೆ ವೇಳೆ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿತ್ತು.</p>.ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆ: ಇ.ಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ.ಆಪರೇಷನ್ ಸಿಂಧೂರ; ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿಗೆ ಸನ್ಮಾನ. <p>‘ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆಗಳನ್ನು ನೀಡುತ್ತಿರಲಿಲ್ಲ’ ಎಂದೂ ಸುಪ್ರೀಂ ಕೋರ್ಟ್ ಹೇಳಿತ್ತು.</p><p>ರಾಹುಲ್ ಗಾಂಧಿ ಉದ್ದೇಶಿಸಿ ಸುಪ್ರೀಂ ಕೋರ್ಟ್ ಹೇಳಿಕೆ ನೀಡಿದ್ದು, ಇದು ಅವರಿಗೆ ಗಂಭೀರ ಎಚ್ಚರಿಕೆಯಾಗಬೇಕು ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.</p><p>ನೀವು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಪ್ರಬುದ್ಧತೆಯ ನಡುವಳಿಕೆಯನ್ನು ತೋರಿಸಿ. ಒಬ್ಬ ಭಾರತೀಯ ಈ ರೀತಿ ಮಾತನಾಡಬಾರದು ಎಂದು ಸುಪ್ರೀಂ ಕೋರ್ಟ್ ಅವರಿಗೆ ಹೇಳುವುದಕ್ಕಿಂತ ದೊಡ್ಡ ಸಂದೇಶ ಇನ್ನೊಂದಿದೆಯೇ? ಎಂದು ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ ಏಳನೇ ದಿನದ ಶೋಧ ಆರಂಭ.ಸಾರಿಗೆ ನೌಕರರ ಮುಷ್ಕರ: ಹುಬ್ಬಳ್ಳಿಯಲ್ಲಿ ಬಸ್ಗೆ ಕಲ್ಲು ಎಸೆದ ಕಿಡಿಗೇಡಿಗಳು.<p>ಕಾಂಗ್ರೆಸ್ ನಾಯಕರು ಮತ್ತು ಅವರ ಕುಟುಂಬವು ಸಂವಿಧಾನವನ್ನು ಸ್ವಲ್ಪವಾದರೂ ಗೌರವಿಸಿದ್ದರೆ, ಸುಪ್ರೀಂ ಕೋರ್ಟ್ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸುವ ಅಗತ್ಯವಿರಲಿಲ್ಲ. ಅವರು ಸಾಂವಿಧಾನಿಕ ಮೌಲ್ಯಗಳ ಅತಿದೊಡ್ಡ ಉಲ್ಲಂಘನೆಗಾರರು ಎಂದು ಅವರು ಪ್ರಧಾನ್ ತಿಳಿಸಿದ್ದಾರೆ</p>.Photos | ಸಾರಿಗೆ ನೌಕರರ ಮುಷ್ಕರ: ಕಾದು ಕುಳಿತರೂ ಬರಲಿಲ್ಲ ಬಸ್.KSRTC Strike |ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ; ಜನಸಾಮಾನ್ಯರಿಗೆ ಪರದಾಟ: ಅಶೋಕ .ಬೀದರ್ | ಎಂದಿನಂತೆ ತೆಲಂಗಾಣ, ಮಹಾರಾಷ್ಟ್ರ ಬಸ್ಗಳ ಸಂಚಾರ.ಚಿಕ್ಕಮಗಳೂರು: ಆರು ಡಿಪೊಗಳ 560 ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>