<p><strong>ನವದೆಹಲಿ:</strong> ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ 'ಭ್ರಷ್ಟ ಜನತಾ ಪಾರ್ಟಿ' ಎಂದು ಟೀಕಿಸಿದ್ದಾರೆ.</p><p>ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು, ಭ್ರಷ್ಟಾಚಾರದಿಂದ ಕೂಡಿದ್ದು, ಅಧಿಕಾರ ದುರುಪಯೋಗವನ್ನು ಮಾಡುತ್ತಿದೆ. ದುರಹಂಕಾರದಿಂದ ಜನರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಅವರು ಆರೋಪಿಸಿದ್ದಾರೆ. </p>.ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನರ್ ರಚನೆ: ಸಿದ್ದರಾಮಯ್ಯ.ನೋಟು ಅಮಾನ್ಯದಂತೆ ರಾಜ್ಯಗಳ ಮೇಲೆ ದಾಳಿ: ಜಿ ರಾಮ್ ಜಿ ಕಾಯ್ದೆ ಬಗ್ಗೆ ರಾಹುಲ್. <p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ ಭಂಡಾರಿ ಹತ್ಯೆ, ಉತ್ತರ ಪ್ರದೇಶದಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣ, ಇಂದೋರ್ನಲ್ಲಿ ಕಲುಪಿತ ನೀರು ಸೇರಿದಂತೆ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. </p><p>ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಜನರ ಸುಲಿಗೆ ಮಾಡುತ್ತಿದೆ. ಕೋಟ್ಯಧಿಪತಿಗಳಿಗಾಗಿ ಅರಾವಳಿ ಪರ್ವತ ಶ್ರೇಣಿಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. </p><p>ಕೋಟ್ಯಧಿಪತಿಗಳಿಗಾಗಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಡಬಲ್ ಎಂಜಿನ್ ಸರ್ಕಾರ ನಡೆಯುತ್ತಿದೆ. ಜನ ಸಾಮಾನ್ಯರಿಗೆ ವಿನಾಶವನ್ನು ಒಡ್ಡುತ್ತಿದೆ ಎಂದು ಅವರು ಹೇಳಿದ್ದಾರೆ. </p>
<p><strong>ನವದೆಹಲಿ:</strong> ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ 'ಭ್ರಷ್ಟ ಜನತಾ ಪಾರ್ಟಿ' ಎಂದು ಟೀಕಿಸಿದ್ದಾರೆ.</p><p>ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು, ಭ್ರಷ್ಟಾಚಾರದಿಂದ ಕೂಡಿದ್ದು, ಅಧಿಕಾರ ದುರುಪಯೋಗವನ್ನು ಮಾಡುತ್ತಿದೆ. ದುರಹಂಕಾರದಿಂದ ಜನರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಅವರು ಆರೋಪಿಸಿದ್ದಾರೆ. </p>.ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನರ್ ರಚನೆ: ಸಿದ್ದರಾಮಯ್ಯ.ನೋಟು ಅಮಾನ್ಯದಂತೆ ರಾಜ್ಯಗಳ ಮೇಲೆ ದಾಳಿ: ಜಿ ರಾಮ್ ಜಿ ಕಾಯ್ದೆ ಬಗ್ಗೆ ರಾಹುಲ್. <p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ ಭಂಡಾರಿ ಹತ್ಯೆ, ಉತ್ತರ ಪ್ರದೇಶದಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣ, ಇಂದೋರ್ನಲ್ಲಿ ಕಲುಪಿತ ನೀರು ಸೇರಿದಂತೆ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. </p><p>ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಜನರ ಸುಲಿಗೆ ಮಾಡುತ್ತಿದೆ. ಕೋಟ್ಯಧಿಪತಿಗಳಿಗಾಗಿ ಅರಾವಳಿ ಪರ್ವತ ಶ್ರೇಣಿಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. </p><p>ಕೋಟ್ಯಧಿಪತಿಗಳಿಗಾಗಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಡಬಲ್ ಎಂಜಿನ್ ಸರ್ಕಾರ ನಡೆಯುತ್ತಿದೆ. ಜನ ಸಾಮಾನ್ಯರಿಗೆ ವಿನಾಶವನ್ನು ಒಡ್ಡುತ್ತಿದೆ ಎಂದು ಅವರು ಹೇಳಿದ್ದಾರೆ. </p>