<p><strong>ಪತ್ತನಂತಿಟ್ಟ</strong>: ಪ್ರಧಾನಿ ನರೇಂದ್ರ ಮೋದಿ ಅವರು ಶಬರಿಮಲೆ ವಿಚಾರದಲ್ಲಿ ಮೌನವಹಿಸಿದ್ದು, ಧರ್ಮದ ಬಗ್ಗೆ ಅವರಿಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಅಡೂರ್ನಲ್ಲಿ ನಡೆದ ಯುಡಿಎಫ್ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಾಂಗ್ರೆಸ್ ಈ ಬಾರಿ ಚುನಾವಣೆಯಲ್ಲಿ ಸಿಪಿಐ(ಎಂ)– ಬಿಜೆಪಿಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.</p><p>ಕೇರಳ ಭೇಟಿ ವೇಳೆ ಪ್ರಧಾನಿ ಮೋದಿ ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದೆ ಇರುವುದು ಎಲ್ಡಿಎಫ್ ಜತೆ ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.</p>.ಹಿಂದಿ ಹೇರಿಕೆ ಬೇಡ: ಸರ್ಕಾರದ ನಿರ್ಧಾರಕ್ಕೆ ನಟಿ ಪೂಜಾಗಾಂಧಿ ಬೆಂಬಲ.ಡಿಕೆಡಿ ಸ್ಪರ್ಧಿಗಳಿಗೆ ಶಿವಣ್ಣ ದಂಪತಿಯಿಂದ ₹ 50 ಸಾವಿರ ಧನ ಸಹಾಯ.<p>ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಆರ್ಎಸ್ಎಸ್ನ ಸೈದ್ಧಾಂತಿಕ ವಿಷಯಗಳ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ರಾಹುಲ್ ಹೇಳಿದ್ದಾರೆ. </p><p>ಪ್ರಧಾನಿ ಮೋದಿ ಅವರಿಗೆ ಧರ್ಮ ಮತ್ತು ದೇವಾಲಯಗಳು ಕೇವಲ ಮತ ಗಳಿಕೆಯ ಸಾಧನಗಳು. ಚುನಾವಣೆ ಸಂದರ್ಭದಲ್ಲಿ ಲಾಭವಾಗುತ್ತದೆ ಎಂದರೆ ಮಾತ್ರ ಮಾತನಾಡುತ್ತಾರೆ. ವಾಸ್ತವವನ್ನು ಅವರು ಎಂದೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. </p><p>ಯುಡಿಎಫ್ ಅಧಿಕಾರಕ್ಕೆ ಬಂದಾಗ ದೇವಾಲಯಕ್ಕೆ ಸಂಬಂಧಿಸಿದ ಅಕ್ರಮಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.</p> .ಕೆಡಿ ಚಿತ್ರದ ‘ಶಿವ ಶಿವ’ ಹಾಡಿನ ಮೇಕಿಂಗ್ ವಿಡಿಯೊ ಹಂಚಿಕೊಂಡ ಪ್ರೇಮ್.ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್ನಲ್ಲಿಟ್ಟ ನೌಕಾಪಡೆ ಅಧಿಕಾರಿ.ರಾಜ್ಯದಲ್ಲಿ ನೌಕರರಿಗೆ ವೇತನ ನೀಡುವುದಕ್ಕೂ ಹಣ ಇಲ್ಲ: ಬಿ.ವೈ.ವಿಜಯೇಂದ್ರ.ಅಕಾಲಿಕ ಮಳೆಯಾರ್ಭಟಕ್ಕೆ ಬೆಳೆ, ಮನೆಗಳಿಗೆ ಹಾನಿ: ತ್ವರಿತ ಪರಿಹಾರಕ್ಕೆ ಅಶೋಕ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ</strong>: ಪ್ರಧಾನಿ ನರೇಂದ್ರ ಮೋದಿ ಅವರು ಶಬರಿಮಲೆ ವಿಚಾರದಲ್ಲಿ ಮೌನವಹಿಸಿದ್ದು, ಧರ್ಮದ ಬಗ್ಗೆ ಅವರಿಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಅಡೂರ್ನಲ್ಲಿ ನಡೆದ ಯುಡಿಎಫ್ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಾಂಗ್ರೆಸ್ ಈ ಬಾರಿ ಚುನಾವಣೆಯಲ್ಲಿ ಸಿಪಿಐ(ಎಂ)– ಬಿಜೆಪಿಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.</p><p>ಕೇರಳ ಭೇಟಿ ವೇಳೆ ಪ್ರಧಾನಿ ಮೋದಿ ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದೆ ಇರುವುದು ಎಲ್ಡಿಎಫ್ ಜತೆ ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.</p>.ಹಿಂದಿ ಹೇರಿಕೆ ಬೇಡ: ಸರ್ಕಾರದ ನಿರ್ಧಾರಕ್ಕೆ ನಟಿ ಪೂಜಾಗಾಂಧಿ ಬೆಂಬಲ.ಡಿಕೆಡಿ ಸ್ಪರ್ಧಿಗಳಿಗೆ ಶಿವಣ್ಣ ದಂಪತಿಯಿಂದ ₹ 50 ಸಾವಿರ ಧನ ಸಹಾಯ.<p>ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಆರ್ಎಸ್ಎಸ್ನ ಸೈದ್ಧಾಂತಿಕ ವಿಷಯಗಳ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ರಾಹುಲ್ ಹೇಳಿದ್ದಾರೆ. </p><p>ಪ್ರಧಾನಿ ಮೋದಿ ಅವರಿಗೆ ಧರ್ಮ ಮತ್ತು ದೇವಾಲಯಗಳು ಕೇವಲ ಮತ ಗಳಿಕೆಯ ಸಾಧನಗಳು. ಚುನಾವಣೆ ಸಂದರ್ಭದಲ್ಲಿ ಲಾಭವಾಗುತ್ತದೆ ಎಂದರೆ ಮಾತ್ರ ಮಾತನಾಡುತ್ತಾರೆ. ವಾಸ್ತವವನ್ನು ಅವರು ಎಂದೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. </p><p>ಯುಡಿಎಫ್ ಅಧಿಕಾರಕ್ಕೆ ಬಂದಾಗ ದೇವಾಲಯಕ್ಕೆ ಸಂಬಂಧಿಸಿದ ಅಕ್ರಮಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.</p> .ಕೆಡಿ ಚಿತ್ರದ ‘ಶಿವ ಶಿವ’ ಹಾಡಿನ ಮೇಕಿಂಗ್ ವಿಡಿಯೊ ಹಂಚಿಕೊಂಡ ಪ್ರೇಮ್.ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್ನಲ್ಲಿಟ್ಟ ನೌಕಾಪಡೆ ಅಧಿಕಾರಿ.ರಾಜ್ಯದಲ್ಲಿ ನೌಕರರಿಗೆ ವೇತನ ನೀಡುವುದಕ್ಕೂ ಹಣ ಇಲ್ಲ: ಬಿ.ವೈ.ವಿಜಯೇಂದ್ರ.ಅಕಾಲಿಕ ಮಳೆಯಾರ್ಭಟಕ್ಕೆ ಬೆಳೆ, ಮನೆಗಳಿಗೆ ಹಾನಿ: ತ್ವರಿತ ಪರಿಹಾರಕ್ಕೆ ಅಶೋಕ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>