<p><strong>ಸುಲ್ತಾನಪುರ:</strong> ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆನ್ನಲಾದ ಆರೋಪ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ 14ಕ್ಕೆ ಮುಂದೂಡಿದೆ.</p><p>2018ರಲ್ಲಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. </p><p>ದೂರುದಾರರ ಪರವಾಗಿ ಹಾಜರಾದ ವಕೀಲ ಸಂತೋಶ್ ಕುಮಾರ್ ಪಾಂಡೆ, ಸಾಕ್ಷಿ ವಿಚಾರಣೆಗೆ ಗೈರಾಗಿದ್ದರಿಂದ ವಿಚಾರಣೆ ಮುಂದೂಡಲಾಯಿತು ಎಂದು ಮಾಹಿತಿ ನೀಡಿದ್ದಾರೆ. </p><p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2023ರಲ್ಲಿ ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಿತ್ತು. ಬಳಿಕ 2024ರ ಫೆಬ್ರುವರಿಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನಂತರ ತಲಾ ₹25 ಸಾವಿರ ಮೌಲ್ಯದ ಇಬ್ಬರ ಶ್ಯೂರಿಟಿಯ ಮೇಲೆ ಜಾಮೀನು ಪಡೆದಿದ್ದರು. </p><p>ಜುಲೈ 26ರಂದು ರಾಹುಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. ತಾವು ನಿರಾಪರಾಧಿ ಎಂದು ಪ್ರತಿಪಾದಿಸಿದ್ದರಲ್ಲದೆ ತಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಹೇಳಿದ್ದರು. </p><p>2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಮಿಶ್ರಾ ದೂರು ನೀಡಿದ್ದರು. </p> .Puri Temple Stampede| ಪರಿಹಾರ ಕಾರ್ಯ ತ್ವರಿತಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ.ಇಂಗ್ಲಿಷ್ ಸಬಲೀಕರಣದ ಭಾಷೆ; ಅವಮಾನದ ಭಾಷೆಯಲ್ಲ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನಪುರ:</strong> ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆನ್ನಲಾದ ಆರೋಪ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ 14ಕ್ಕೆ ಮುಂದೂಡಿದೆ.</p><p>2018ರಲ್ಲಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. </p><p>ದೂರುದಾರರ ಪರವಾಗಿ ಹಾಜರಾದ ವಕೀಲ ಸಂತೋಶ್ ಕುಮಾರ್ ಪಾಂಡೆ, ಸಾಕ್ಷಿ ವಿಚಾರಣೆಗೆ ಗೈರಾಗಿದ್ದರಿಂದ ವಿಚಾರಣೆ ಮುಂದೂಡಲಾಯಿತು ಎಂದು ಮಾಹಿತಿ ನೀಡಿದ್ದಾರೆ. </p><p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2023ರಲ್ಲಿ ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಿತ್ತು. ಬಳಿಕ 2024ರ ಫೆಬ್ರುವರಿಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನಂತರ ತಲಾ ₹25 ಸಾವಿರ ಮೌಲ್ಯದ ಇಬ್ಬರ ಶ್ಯೂರಿಟಿಯ ಮೇಲೆ ಜಾಮೀನು ಪಡೆದಿದ್ದರು. </p><p>ಜುಲೈ 26ರಂದು ರಾಹುಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. ತಾವು ನಿರಾಪರಾಧಿ ಎಂದು ಪ್ರತಿಪಾದಿಸಿದ್ದರಲ್ಲದೆ ತಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಹೇಳಿದ್ದರು. </p><p>2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಮಿಶ್ರಾ ದೂರು ನೀಡಿದ್ದರು. </p> .Puri Temple Stampede| ಪರಿಹಾರ ಕಾರ್ಯ ತ್ವರಿತಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ.ಇಂಗ್ಲಿಷ್ ಸಬಲೀಕರಣದ ಭಾಷೆ; ಅವಮಾನದ ಭಾಷೆಯಲ್ಲ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>