<p><strong>ಸುಲ್ತಾನ್ಪುರ:</strong> ಸಹೋದ್ಯೋಗಿಯೊಬ್ಬರ ಸಾವಿಗೆ ಸಂತಾಪಾರ್ಥ ವಕೀಲರು ಕೆಲಸಕ್ಕೆ ಹಾಜರಾಗದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಉತ್ತರ ಪ್ರದೇಶದ ಸುಲ್ತಾನ್ಪುರ ನ್ಯಾಯಾಲಯ ಮಂದೂಡಿದೆ.</p>.ಸಾತ್ಯಕಿ ಸಾವರ್ಕರ್ ತಾಯಿಯ ವಂಶವೃಕ್ಷ ಮಾಹಿತಿ ಕೋರಿದ್ದ ರಾಹುಲ್ ಗಾಂಧಿ ಅರ್ಜಿ ವಜಾ.<p>ಕಮಲ್ ಶ್ರೀವಾತ್ಸವ ಎನ್ನುವ ವಕೀಲರು ಮೃತಪಟ್ಟಿದ್ದರಿಂದ ಬಾರ್ ಸಂಘವು ಸೋಮವಾರ ಕೆಲಸ ರಹಿತ ದಿನವೆಂದು ಆಚರಿಸಿತ್ತು. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಜುಲೈ 1ಕ್ಕೆ ಕೋರ್ಟ್ ಮುಂದೂಡಿತು.</p><p>2018ರ ಕರ್ನಾಟಕ ಚುನಾವಣೆ ಪ್ರಚಾರದ ವೇಳೆಯಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.</p>.ಬಿಜೆಪಿ-ಆರ್ಎಸ್ಎಸ್ ಮೀಸಲಾತಿ ವಿರೋಧಿ ಕ್ರಮಗಳ ವಿರುದ್ಧ ಹೋರಾಟ: ರಾಹುಲ್ ಗಾಂಧಿ.<p>ಏಪ್ರಿಲ್ 28ರಂದು ನಡೆದ ಹಿಂದಿನ ವಿಚಾರಣೆ ವೇಳೆ ದೂರುದಾರರು, ಕೊತ್ವಾಲಿ ದೆಹತ್ನ ಪಿತಾಂಬರಪುರ ನಿವಾಸಿ ಅನಿಲ್ ಮಿಶ್ರಾ ಎಂಬವರನ್ನು ಸಾಕ್ಷಿಯಾಗಿ ಹಾಜರುಪಡಿಸಿದ್ದರು.</p><p>ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಈಗಾಗಲೇ ಸಾಕ್ಷಿದಾರರಿಗೆ ಪಾಟಿ ಸವಾಲು ಹಾಕಿದ್ದಾರೆ.</p>.ರಾಜ್ಯಗಳ ಧ್ವನಿ ಅಡಗಿಸಲು ರಾಜ್ಯಪಾಲರ ದುರ್ಬಳಕೆ: ರಾಹುಲ್ ಗಾಂಧಿ.<p>2023ರ ಡಿಸೆಂಬರ್ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿತ್ತು. 2024ರ ಫೆಬ್ರುವರಿಯಲ್ಲಿ ಕೋರ್ಟ್ಗೆ ಶರಣಾಗಿದ್ದರು. ₹25 ಸಾವಿರ ಎರಡು ಶ್ಯೂರಿಟಿಗಳ ಮೇಲೆ ಜಾಮೀನು ಪಡೆದಿದ್ದರು.</p><p>ಕಳೆದ ವರ್ಷ ಜುಲೈ 26ರಂದು ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ತಾನು ತಪ್ಪಿತಸ್ಥನಲ್ಲವೆಂದೂ, ರಾಜಕೀಯ ಪಿತೂರಿಯ ಭಾಗವಾಗಿ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದರು.</p> .ಪಹಲ್ಗಾಮ್ ದಾಳಿ: ವಿನಯ್ ನರ್ವಾಲ್ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ:</strong> ಸಹೋದ್ಯೋಗಿಯೊಬ್ಬರ ಸಾವಿಗೆ ಸಂತಾಪಾರ್ಥ ವಕೀಲರು ಕೆಲಸಕ್ಕೆ ಹಾಜರಾಗದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಉತ್ತರ ಪ್ರದೇಶದ ಸುಲ್ತಾನ್ಪುರ ನ್ಯಾಯಾಲಯ ಮಂದೂಡಿದೆ.</p>.ಸಾತ್ಯಕಿ ಸಾವರ್ಕರ್ ತಾಯಿಯ ವಂಶವೃಕ್ಷ ಮಾಹಿತಿ ಕೋರಿದ್ದ ರಾಹುಲ್ ಗಾಂಧಿ ಅರ್ಜಿ ವಜಾ.<p>ಕಮಲ್ ಶ್ರೀವಾತ್ಸವ ಎನ್ನುವ ವಕೀಲರು ಮೃತಪಟ್ಟಿದ್ದರಿಂದ ಬಾರ್ ಸಂಘವು ಸೋಮವಾರ ಕೆಲಸ ರಹಿತ ದಿನವೆಂದು ಆಚರಿಸಿತ್ತು. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಜುಲೈ 1ಕ್ಕೆ ಕೋರ್ಟ್ ಮುಂದೂಡಿತು.</p><p>2018ರ ಕರ್ನಾಟಕ ಚುನಾವಣೆ ಪ್ರಚಾರದ ವೇಳೆಯಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.</p>.ಬಿಜೆಪಿ-ಆರ್ಎಸ್ಎಸ್ ಮೀಸಲಾತಿ ವಿರೋಧಿ ಕ್ರಮಗಳ ವಿರುದ್ಧ ಹೋರಾಟ: ರಾಹುಲ್ ಗಾಂಧಿ.<p>ಏಪ್ರಿಲ್ 28ರಂದು ನಡೆದ ಹಿಂದಿನ ವಿಚಾರಣೆ ವೇಳೆ ದೂರುದಾರರು, ಕೊತ್ವಾಲಿ ದೆಹತ್ನ ಪಿತಾಂಬರಪುರ ನಿವಾಸಿ ಅನಿಲ್ ಮಿಶ್ರಾ ಎಂಬವರನ್ನು ಸಾಕ್ಷಿಯಾಗಿ ಹಾಜರುಪಡಿಸಿದ್ದರು.</p><p>ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಈಗಾಗಲೇ ಸಾಕ್ಷಿದಾರರಿಗೆ ಪಾಟಿ ಸವಾಲು ಹಾಕಿದ್ದಾರೆ.</p>.ರಾಜ್ಯಗಳ ಧ್ವನಿ ಅಡಗಿಸಲು ರಾಜ್ಯಪಾಲರ ದುರ್ಬಳಕೆ: ರಾಹುಲ್ ಗಾಂಧಿ.<p>2023ರ ಡಿಸೆಂಬರ್ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿತ್ತು. 2024ರ ಫೆಬ್ರುವರಿಯಲ್ಲಿ ಕೋರ್ಟ್ಗೆ ಶರಣಾಗಿದ್ದರು. ₹25 ಸಾವಿರ ಎರಡು ಶ್ಯೂರಿಟಿಗಳ ಮೇಲೆ ಜಾಮೀನು ಪಡೆದಿದ್ದರು.</p><p>ಕಳೆದ ವರ್ಷ ಜುಲೈ 26ರಂದು ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ತಾನು ತಪ್ಪಿತಸ್ಥನಲ್ಲವೆಂದೂ, ರಾಜಕೀಯ ಪಿತೂರಿಯ ಭಾಗವಾಗಿ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದರು.</p> .ಪಹಲ್ಗಾಮ್ ದಾಳಿ: ವಿನಯ್ ನರ್ವಾಲ್ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>