<p><strong>ನವದೆಹಲಿ:</strong> ತಮಿಳು ನಟ ಹಾಗೂ ಟಿವಿಕೆ ನಾಯಕ ವಿಜಯ್ ನಟನೆಯ ಜನ ನಾಯಗನ್ ಸಿನಿಮಾದ ಸೆನ್ಸಾರ್ ವಿವಾದವು ರಾಜಕೀಯ ಆಯಾಮ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜನ ನಾಯಗನ್ ಸಿನಿಮಾಗೆ ತಡೆ ನೀಡಿರುವುದು ತಮಿಳು ಸಂಸ್ಕೃತಿಯ ಮೇಲಿನ ದಾಳಿಯಾಗಿದೆ. ತಮಿಳರ ಧ್ವನಿ ಹತ್ತಿಕ್ಕಲು ಮೋದಿಗೆ ಸಾಧ್ಯವಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. </p>.<p>ಟಿವಿಕೆ ಪಕ್ಷದ ಸ್ಥಾಪಕರಾಗಿರುವ, ನಟ ವಿಜಯ್ ಅವರ ಕೊನೆಯ ಚಿತ್ರ ಎಂದು ಜನ ನಾಯಗನ್ ಸಿನಿಮಾವನ್ನು ಬಿಂಬಿಸಲಾಗಿದೆ. ಚಿತ್ರವು ಜ.9ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಸೆನ್ಸಾರ್ ವಿವಾದವು ಕೋರ್ಟ್ ಮೆಟ್ಟಿಲೇರಿದ್ದರಿಂದ ಅದು ವಿಳಂಬವಾಗಿದೆ.</p><p>ಜನ ನಾಯಗನ್ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರಕ್ಕೆ ತಡೆ ನೀಡಿ ಮದ್ರಾಸ್ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಇತ್ತೀಚೆಗೆ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. </p>.‘ಜನ ನಾಯಗನ್‘ ಸೆನ್ಸಾರ್ ಪ್ರಮಾಣಪತ್ರಕ್ಕೆ ತಡೆ: ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳು ನಟ ಹಾಗೂ ಟಿವಿಕೆ ನಾಯಕ ವಿಜಯ್ ನಟನೆಯ ಜನ ನಾಯಗನ್ ಸಿನಿಮಾದ ಸೆನ್ಸಾರ್ ವಿವಾದವು ರಾಜಕೀಯ ಆಯಾಮ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜನ ನಾಯಗನ್ ಸಿನಿಮಾಗೆ ತಡೆ ನೀಡಿರುವುದು ತಮಿಳು ಸಂಸ್ಕೃತಿಯ ಮೇಲಿನ ದಾಳಿಯಾಗಿದೆ. ತಮಿಳರ ಧ್ವನಿ ಹತ್ತಿಕ್ಕಲು ಮೋದಿಗೆ ಸಾಧ್ಯವಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. </p>.<p>ಟಿವಿಕೆ ಪಕ್ಷದ ಸ್ಥಾಪಕರಾಗಿರುವ, ನಟ ವಿಜಯ್ ಅವರ ಕೊನೆಯ ಚಿತ್ರ ಎಂದು ಜನ ನಾಯಗನ್ ಸಿನಿಮಾವನ್ನು ಬಿಂಬಿಸಲಾಗಿದೆ. ಚಿತ್ರವು ಜ.9ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಸೆನ್ಸಾರ್ ವಿವಾದವು ಕೋರ್ಟ್ ಮೆಟ್ಟಿಲೇರಿದ್ದರಿಂದ ಅದು ವಿಳಂಬವಾಗಿದೆ.</p><p>ಜನ ನಾಯಗನ್ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರಕ್ಕೆ ತಡೆ ನೀಡಿ ಮದ್ರಾಸ್ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಇತ್ತೀಚೆಗೆ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. </p>.‘ಜನ ನಾಯಗನ್‘ ಸೆನ್ಸಾರ್ ಪ್ರಮಾಣಪತ್ರಕ್ಕೆ ತಡೆ: ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>