<p><strong>ಭೋಪಾಲ್(ಮಧ್ಯ ಪ್ರದೇಶ):</strong> ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ಭಾರತೀಯ ರೈತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದ್ದು, ಈ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.</p><p>ಇಲ್ಲಿ ನಡೆದ 'ಕಿಸಾನ್ ಮಹಾಚೌಪಾಲ್' ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ‘ಇದು ಒಪ್ಪಂದವಲ್ಲ, ಬದಲಾಗಿ ದೇಶದ ರೈತರ ಹೃದಯಕ್ಕೆ ಹೊಡೆದ ಬಾಣ’ ಎಂದಿದ್ದಾರೆ.</p><p>‘ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿತಿನ್ ಗಡ್ಕರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p><p>ಮುಂದುವರಿದು, ‘ಎಪ್ಸ್ಟೈನ್ ಫೈಲ್ಸ್ ಭಯ ಮತ್ತು ಅದಾನಿಯನ್ನು ರಕ್ಷಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p><p>‘ಅಮೆರಿಕ ಸುಪ್ರೀಂ ಕೋರ್ಟ್ ಟ್ರಂಪ್ ಸುಂಕಗಳನ್ನು ರದ್ದುಗೊಳಿಸಿದ್ದು, ಪ್ರಪಂಚದಾದ್ಯಂತ ಹಲವು ದೇಶಗಳು ವ್ಯಾಪಾರದ ಬಗ್ಗೆ ಮರುಮಾತುಕತೆಗೆ ಮುಂದಾಗಿವೆ. ನೀವು ಯಾಕೆ ಮೌನವಾಗಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.</p><p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ವ್ಯಾಪಾರ ಒಪ್ಪಂದವು ಕೇಂದ್ರ ಸರ್ಕಾರದ ಶರಣಾಗತಿಯನ್ನು ತೋರಿಸುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್(ಮಧ್ಯ ಪ್ರದೇಶ):</strong> ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ಭಾರತೀಯ ರೈತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದ್ದು, ಈ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.</p><p>ಇಲ್ಲಿ ನಡೆದ 'ಕಿಸಾನ್ ಮಹಾಚೌಪಾಲ್' ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ‘ಇದು ಒಪ್ಪಂದವಲ್ಲ, ಬದಲಾಗಿ ದೇಶದ ರೈತರ ಹೃದಯಕ್ಕೆ ಹೊಡೆದ ಬಾಣ’ ಎಂದಿದ್ದಾರೆ.</p><p>‘ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿತಿನ್ ಗಡ್ಕರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p><p>ಮುಂದುವರಿದು, ‘ಎಪ್ಸ್ಟೈನ್ ಫೈಲ್ಸ್ ಭಯ ಮತ್ತು ಅದಾನಿಯನ್ನು ರಕ್ಷಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p><p>‘ಅಮೆರಿಕ ಸುಪ್ರೀಂ ಕೋರ್ಟ್ ಟ್ರಂಪ್ ಸುಂಕಗಳನ್ನು ರದ್ದುಗೊಳಿಸಿದ್ದು, ಪ್ರಪಂಚದಾದ್ಯಂತ ಹಲವು ದೇಶಗಳು ವ್ಯಾಪಾರದ ಬಗ್ಗೆ ಮರುಮಾತುಕತೆಗೆ ಮುಂದಾಗಿವೆ. ನೀವು ಯಾಕೆ ಮೌನವಾಗಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.</p><p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ವ್ಯಾಪಾರ ಒಪ್ಪಂದವು ಕೇಂದ್ರ ಸರ್ಕಾರದ ಶರಣಾಗತಿಯನ್ನು ತೋರಿಸುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>