<p><strong>ರಾಯ್ಬರೇಲಿ (ಉತ್ತರಪ್ರದೇಶ) (): ‘</strong>ಆರ್ಥಿಕ ಆಘಾತ’ ಕಾದಿದೆ. ಆದರೆ, ಅದು ಅದಾನಿ, ಅಂಬಾನಿ ಅಥವಾ ಮೋದಿ ಅವರ ಮೇಲೆ ಪರಿಣಾಮ ಬೀರುವುದಿಲ್ಲ; ಯುವಕರು, ಕಾರ್ಮಿಕರು ಮತ್ತು ಸಣ್ಣ ವರ್ತಕರ ಮೇಲೆ ಬೀರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದರು.</p>.<p>‘ತುಂಬಾ ಕಠಿಣವಾದ ಸಂದರ್ಭ ಬರಲಿದೆ. ಹಲವು ವರ್ಷಗಳಿಂದ ನೋಡದ ಆರ್ಥಿಕ ಸಂಕಷ್ಟದ ಬಿರುಗಾಳಿ ಬೀಸಲಿದೆ’ ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳುವ ಬದಲು, ದೇಶದ ಜನರಿಗೆ ವಿದೇಶ ಪ್ರವಾಸ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ, ಅವರು ವಿದೇಶಗಳನ್ನು ಸುತ್ತುತ್ತಿದ್ದಾರೆ. ಅವರು ತಮ್ಮದೇ ಮಾತನ್ನು ಪಾಲಿಸುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಅವರು ಅಂಬಾನಿ ಮತ್ತು ಅದಾನಿಗಾಗಿ ಮಾಡಿರುವ ವ್ಯವಸ್ಥೆ ಹಾಗೇ ಉಳಿಯುವುದಿಲ್ಲ, ಅದು ಕುಸಿಯುತ್ತದೆ. ದುರದೃಷ್ಟವೆಂದರೆ ಅದರ ಪರಿಣಾಮವನ್ನು ಸಾಮಾನ್ಯ ಜನರು ಅನುಭವಿಸುತ್ತಾರೆ. ಅವರು ತಮ್ಮ ಅರಮನೆಗಳಲ್ಲಿ ಸುರಕ್ಷಿತರಾಗಿರುತ್ತಾರೆ. ಆದರೆ, ಉತ್ತರಪ್ರದೇಶದ ಯುವಕರು ಮತ್ತು ಜನರು ಸಂಕಷ್ಟವನ್ನು ಅನುಭವಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ (ಉತ್ತರಪ್ರದೇಶ) (): ‘</strong>ಆರ್ಥಿಕ ಆಘಾತ’ ಕಾದಿದೆ. ಆದರೆ, ಅದು ಅದಾನಿ, ಅಂಬಾನಿ ಅಥವಾ ಮೋದಿ ಅವರ ಮೇಲೆ ಪರಿಣಾಮ ಬೀರುವುದಿಲ್ಲ; ಯುವಕರು, ಕಾರ್ಮಿಕರು ಮತ್ತು ಸಣ್ಣ ವರ್ತಕರ ಮೇಲೆ ಬೀರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದರು.</p>.<p>‘ತುಂಬಾ ಕಠಿಣವಾದ ಸಂದರ್ಭ ಬರಲಿದೆ. ಹಲವು ವರ್ಷಗಳಿಂದ ನೋಡದ ಆರ್ಥಿಕ ಸಂಕಷ್ಟದ ಬಿರುಗಾಳಿ ಬೀಸಲಿದೆ’ ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳುವ ಬದಲು, ದೇಶದ ಜನರಿಗೆ ವಿದೇಶ ಪ್ರವಾಸ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ, ಅವರು ವಿದೇಶಗಳನ್ನು ಸುತ್ತುತ್ತಿದ್ದಾರೆ. ಅವರು ತಮ್ಮದೇ ಮಾತನ್ನು ಪಾಲಿಸುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಅವರು ಅಂಬಾನಿ ಮತ್ತು ಅದಾನಿಗಾಗಿ ಮಾಡಿರುವ ವ್ಯವಸ್ಥೆ ಹಾಗೇ ಉಳಿಯುವುದಿಲ್ಲ, ಅದು ಕುಸಿಯುತ್ತದೆ. ದುರದೃಷ್ಟವೆಂದರೆ ಅದರ ಪರಿಣಾಮವನ್ನು ಸಾಮಾನ್ಯ ಜನರು ಅನುಭವಿಸುತ್ತಾರೆ. ಅವರು ತಮ್ಮ ಅರಮನೆಗಳಲ್ಲಿ ಸುರಕ್ಷಿತರಾಗಿರುತ್ತಾರೆ. ಆದರೆ, ಉತ್ತರಪ್ರದೇಶದ ಯುವಕರು ಮತ್ತು ಜನರು ಸಂಕಷ್ಟವನ್ನು ಅನುಭವಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>