<p><strong>ನವದೆಹಲಿ</strong>: ಕರ್ನಾಟಕದ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2024ರ ಸಾರ್ವತ್ರಿಕ ಚುನಾವಣೆಯನ್ನು ಗೆಲ್ಲಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿತ್ತು ಎಂದು ಆರೋಪಿಸಿದ್ದಾರೆ. ಹಾಗೆಯೇ, ಇದು 'ಸಂವಿಧಾನ ವಿರೋಧಿ ಅಪರಾಧ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅವರು, ಒಂದು ತಂಡವನ್ನು ರಚಿಸಿ ಕಳೆದ ಆರು ತಿಂಗಳಿನಿಂದ ಮತಗಳ್ಳತನಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್, ಚುನಾವಣಾ ಆಯೋಗವು ಕಳೆದ 10–15 ವರ್ಷಗಳ ದಾಖಲೆಗಳನ್ನು ಹಾಗೂ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ಆಯೋಗವು ಮತಗಳ್ಳತನದಲ್ಲಿ ಭಾಗಿಯಾಗಿದೆ ಎಂದರ್ಥ ಎಂದು ಒತ್ತಿಹೇಳಿದ್ದಾರೆ.</p><p>'ನಾವು ತುಂಬಾ ಪ್ರೀತಿಸುವ ಪ್ರಜಾಪ್ರಭುತ್ವ ಸದ್ಯ ಅಸ್ತಿತ್ವದಲ್ಲಿಲ್ಲ. ಹೀಗಾಗಿ, ನ್ಯಾಯಾಂಗವು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿದೆ' ಎಂದು ರಾಹುಲ್ ಒತ್ತಾಯಿಸಿದ್ದಾರೆ.</p><p>ಆನ್ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.</p><p>ಕ್ಷೇತ್ರದಲ್ಲಿ ಸುಮಾರು 1,00,250 ಮತಗಳ್ಳತನವಾಗಿದೆ ಎಂದು ಅಂಕಿ–ಅಂಶಗಳ ಸಮೇತ ಪ್ರಸ್ತಾಪಿಸಿರುವ ರಾಹುಲ್, ಈ ಪೈಕಿ 11,965 ನಕಲಿ ಮತದಾರರು ಒಂದೇ ವಿಧಾನಸಭೆ ವ್ಯಾಪ್ತಿಯಲ್ಲಿದ್ದಾರೆ. ಉಳಿದಂತೆ, ಸುಮಾರು 40,009 ಮಂದಿ ನಕಲಿ ಹಾಗೂ ಸುಳ್ಳು ವಿಳಾಸ ಹೊಂದಿದವರು. 10,452 ಮತದಾರರ ಹೆಸರಿನಲ್ಲಿ ಒಂದೇ ವಿಳಾಸ ಉಲ್ಲೇಖವಾಗಿದೆ. 4,132 ಮತದಾರರ ಫೋಟೊ ಅಮಾನ್ಯವಾಗಿದೆ. ಹಾಗೆಯೇ, ಸುಮಾರು 33,692 ಮಂದಿ ಹೊಸ ಮತದಾರರ ನೋಂದಣಿಗೆ ಇರುವ ಫಾರ್ಮ್–6 ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.</p><p>ದೇಶದಾದ್ಯಂತ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ಪ್ರತಿಪಾದಿಸಿರುವ ರಾಹುಲ್, ಇದು ಸಂವಿಧಾನ ಹಾಗೂ ರಾಷ್ಟ್ರದ ಸಮಗ್ರತೆಯ ವಿರುದ್ಧದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂಬುದನ್ನು ಆಯೋಗಕ್ಕೆ ನೆನಪಿಸಲು ಬಯಸುವುದಾಗಿಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2024ರ ಸಾರ್ವತ್ರಿಕ ಚುನಾವಣೆಯನ್ನು ಗೆಲ್ಲಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿತ್ತು ಎಂದು ಆರೋಪಿಸಿದ್ದಾರೆ. ಹಾಗೆಯೇ, ಇದು 'ಸಂವಿಧಾನ ವಿರೋಧಿ ಅಪರಾಧ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅವರು, ಒಂದು ತಂಡವನ್ನು ರಚಿಸಿ ಕಳೆದ ಆರು ತಿಂಗಳಿನಿಂದ ಮತಗಳ್ಳತನಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್, ಚುನಾವಣಾ ಆಯೋಗವು ಕಳೆದ 10–15 ವರ್ಷಗಳ ದಾಖಲೆಗಳನ್ನು ಹಾಗೂ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ಆಯೋಗವು ಮತಗಳ್ಳತನದಲ್ಲಿ ಭಾಗಿಯಾಗಿದೆ ಎಂದರ್ಥ ಎಂದು ಒತ್ತಿಹೇಳಿದ್ದಾರೆ.</p><p>'ನಾವು ತುಂಬಾ ಪ್ರೀತಿಸುವ ಪ್ರಜಾಪ್ರಭುತ್ವ ಸದ್ಯ ಅಸ್ತಿತ್ವದಲ್ಲಿಲ್ಲ. ಹೀಗಾಗಿ, ನ್ಯಾಯಾಂಗವು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿದೆ' ಎಂದು ರಾಹುಲ್ ಒತ್ತಾಯಿಸಿದ್ದಾರೆ.</p><p>ಆನ್ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.</p><p>ಕ್ಷೇತ್ರದಲ್ಲಿ ಸುಮಾರು 1,00,250 ಮತಗಳ್ಳತನವಾಗಿದೆ ಎಂದು ಅಂಕಿ–ಅಂಶಗಳ ಸಮೇತ ಪ್ರಸ್ತಾಪಿಸಿರುವ ರಾಹುಲ್, ಈ ಪೈಕಿ 11,965 ನಕಲಿ ಮತದಾರರು ಒಂದೇ ವಿಧಾನಸಭೆ ವ್ಯಾಪ್ತಿಯಲ್ಲಿದ್ದಾರೆ. ಉಳಿದಂತೆ, ಸುಮಾರು 40,009 ಮಂದಿ ನಕಲಿ ಹಾಗೂ ಸುಳ್ಳು ವಿಳಾಸ ಹೊಂದಿದವರು. 10,452 ಮತದಾರರ ಹೆಸರಿನಲ್ಲಿ ಒಂದೇ ವಿಳಾಸ ಉಲ್ಲೇಖವಾಗಿದೆ. 4,132 ಮತದಾರರ ಫೋಟೊ ಅಮಾನ್ಯವಾಗಿದೆ. ಹಾಗೆಯೇ, ಸುಮಾರು 33,692 ಮಂದಿ ಹೊಸ ಮತದಾರರ ನೋಂದಣಿಗೆ ಇರುವ ಫಾರ್ಮ್–6 ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.</p><p>ದೇಶದಾದ್ಯಂತ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ಪ್ರತಿಪಾದಿಸಿರುವ ರಾಹುಲ್, ಇದು ಸಂವಿಧಾನ ಹಾಗೂ ರಾಷ್ಟ್ರದ ಸಮಗ್ರತೆಯ ವಿರುದ್ಧದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂಬುದನ್ನು ಆಯೋಗಕ್ಕೆ ನೆನಪಿಸಲು ಬಯಸುವುದಾಗಿಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>