ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಕಳೆದ 50 ವರ್ಷಗಳಿಂದ ಪ್ರತಿನಿಧಿಸುತ್ತಿರುವ ಪುದುಪ್ಪಳ್ಳಿ ವಿಧಾನಸಭಾ ಕ್ಷೇತ್ರದ ಮಣ್ಣಾರ್ಕಾಡ್ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ದಕ್ಷಿಣದ ರಾಜ್ಯ ಕೇರಳದಲ್ಲಿ ನಮ್ಮ ಹೊಸ ಆಲೋಚನೆಯನ್ನು ಪರೀಕ್ಷಿಸುತ್ತಿದ್ದೇವೆ. ವರ್ಷಕ್ಕೆ ₹72,000 ಮೊತ್ತವು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ. ಯೋಜನೆ ಜಾರಿಯಲ್ಲಿ ನನ್ನ ಸ್ವಾರ್ಥವೂ ಇದೆ’ ಎಂದು ಹೇಳಿದ್ದಾರೆ.