<p><strong>ರಾಯ್ಬರೇಲಿ:</strong> ಆಡಳಿತರೂಢ ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪವನ್ನು ಗುರುವಾರ ಪುನರುಚ್ಛರಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗಾಗಲೇ ಈ ಬಗ್ಗೆ ಸಾಕ್ಷ್ಯ ಒದಗಿಸಿದ್ದು, ಭವಿಷ್ಯದಲ್ಲಿ ಸ್ಫೋಟಕ ಪುರಾವೆ ಒದಗಿಸುವುದಾಗಿ ಹೇಳಿದ್ದಾರೆ.</p>.ಆಳಂದದಲ್ಲೂ ಮತಗಳ್ಳತನ ಯತ್ನ ನಡೆದಿತ್ತು: ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ.<p>ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ, ಹರಿಯಾಣ ಹಾಗೂ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ. ಈ ಬಗ್ಗೆ ನಾವು ನಿಖರ ಸಾಕ್ಷ್ಯ ಒದಗಿಸಿದ್ದೇವೆ. ಭವಿಷ್ಯದಲ್ಲಿ ನಿಖರ ಹಾಗೂ ಸ್ಫೋಟಕ ಮಾಹಿತಿ ನೀಡುತ್ತೇವೆ’ ಎಂದು ಹೇಳಿದ್ದಾರೆ.</p><p>‘ಮತಗಳ್ಳರೇ ಗದ್ದುಗೆ ಬಿಡಿ’ ಎನ್ನುವ ಘೋಷವಾಕ್ಯ ದೇಶದಾದ್ಯಂತ ಮಾರ್ದನಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.</p>.ಎಸ್ಐಆರ್ ‘ಮತಗಳ್ಳತನ’ದ ಹೊಸ ಅಸ್ತ್ರ: ರಾಹುಲ್ ಗಾಂಧಿ ಆರೋಪ.<p>ಮತಗಳ್ಳತನ ಮಾಡಿ ಸರ್ಕಾರ ರಚನೆ ಮಾಡಲಾಗಿದೆ. ಇದಕ್ಕೆ ನಾವು ಸಾಕ್ಷ್ಯ ಒದಗಿಸುತ್ತೇವೆ. ಬಿಜೆಪಿ ನಾಯಕರು ಈಗ ಕ್ರೋಧಗೊಳ್ಳಬಾರದು. ಹೈಡ್ರೋಜನ್ ಬಾಂಬ್ ಬಂದಾಗ ಎಲ್ಲವೂ ಕೊಚ್ಚಿ ಹೋಗಲಿದೆ ಎಂದರು.</p><p> ತಮ್ಮ ಲೋಕಸಭಾ ಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಗುರುವಾರ ದಿಶಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.</p> .SIR ಕುರಿತ ಅಪಪ್ರಚಾರ, ಮತಗಳ್ಳತನ ಆರೋಪಗಳಿಗೆ ಹೆದರಲ್ಲ: CEC ಜ್ಞಾನೇಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ:</strong> ಆಡಳಿತರೂಢ ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪವನ್ನು ಗುರುವಾರ ಪುನರುಚ್ಛರಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗಾಗಲೇ ಈ ಬಗ್ಗೆ ಸಾಕ್ಷ್ಯ ಒದಗಿಸಿದ್ದು, ಭವಿಷ್ಯದಲ್ಲಿ ಸ್ಫೋಟಕ ಪುರಾವೆ ಒದಗಿಸುವುದಾಗಿ ಹೇಳಿದ್ದಾರೆ.</p>.ಆಳಂದದಲ್ಲೂ ಮತಗಳ್ಳತನ ಯತ್ನ ನಡೆದಿತ್ತು: ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ.<p>ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ, ಹರಿಯಾಣ ಹಾಗೂ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ. ಈ ಬಗ್ಗೆ ನಾವು ನಿಖರ ಸಾಕ್ಷ್ಯ ಒದಗಿಸಿದ್ದೇವೆ. ಭವಿಷ್ಯದಲ್ಲಿ ನಿಖರ ಹಾಗೂ ಸ್ಫೋಟಕ ಮಾಹಿತಿ ನೀಡುತ್ತೇವೆ’ ಎಂದು ಹೇಳಿದ್ದಾರೆ.</p><p>‘ಮತಗಳ್ಳರೇ ಗದ್ದುಗೆ ಬಿಡಿ’ ಎನ್ನುವ ಘೋಷವಾಕ್ಯ ದೇಶದಾದ್ಯಂತ ಮಾರ್ದನಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.</p>.ಎಸ್ಐಆರ್ ‘ಮತಗಳ್ಳತನ’ದ ಹೊಸ ಅಸ್ತ್ರ: ರಾಹುಲ್ ಗಾಂಧಿ ಆರೋಪ.<p>ಮತಗಳ್ಳತನ ಮಾಡಿ ಸರ್ಕಾರ ರಚನೆ ಮಾಡಲಾಗಿದೆ. ಇದಕ್ಕೆ ನಾವು ಸಾಕ್ಷ್ಯ ಒದಗಿಸುತ್ತೇವೆ. ಬಿಜೆಪಿ ನಾಯಕರು ಈಗ ಕ್ರೋಧಗೊಳ್ಳಬಾರದು. ಹೈಡ್ರೋಜನ್ ಬಾಂಬ್ ಬಂದಾಗ ಎಲ್ಲವೂ ಕೊಚ್ಚಿ ಹೋಗಲಿದೆ ಎಂದರು.</p><p> ತಮ್ಮ ಲೋಕಸಭಾ ಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಗುರುವಾರ ದಿಶಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.</p> .SIR ಕುರಿತ ಅಪಪ್ರಚಾರ, ಮತಗಳ್ಳತನ ಆರೋಪಗಳಿಗೆ ಹೆದರಲ್ಲ: CEC ಜ್ಞಾನೇಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>