<p><strong>ನವದೆಹಲಿ:</strong> ಮದ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ದಲಿತ ದಂಪತಿ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಖಂಡಿಸಿದ್ದಾರೆ.</p>.<p>ರಾಹುಲ್ ಗಾಂಧಿ ಈ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ನಮ್ಮ ಹೋರಾಟ ಅನ್ಯಾಯದ ವಿರುದ್ಧ ಎಂದಿದ್ದಾರೆ.</p>.<p>‘ರಾಜಕುಮಾರ್ ಅಹಿರವಾರ್ ಮತ್ತು ಅವರ ಪತ್ನಿ ಸಾವಿತ್ರಿ ಸರ್ಕಾರಕ್ಕೆ ಸೇರಿದ್ದ ಸ್ಥಳದಲ್ಲಿ ಬೆಳೆ ಬೆಳೆದಿದ್ದರು. ಆದರೆ, ಆ ಜಾಗವನ್ನು ಕಾಲೇಜಿಗಾಗಿ ಗೊತ್ತುಪಡಿಸಲಾಗಿತ್ತು. ಹಾಗಾಗಿ ಸ್ಥಳವನ್ನು ಖಾಲಿ ಮಾಡುವಂತೆ ನಾವು ಸೂಚಿಸಿದಾಗ ಪತಿ–ಪತ್ನಿ ಕೀಟನಾಶಕವನ್ನು ಕುಡಿದಿದ್ದಾರೆ. ದಂಪತಿ ಆಸ್ಪತ್ರೆಗೆ ಬರಲು ಒಪ್ಪದಿದ್ದಾಗ ಅವರಿಬ್ಬರನ್ನು ಬಲವಂತವಾಗಿ ಕರೆದುಕೊಂಡು ಹೋಗಬೇಕಾಯಿತು ಎಂದು ಜಿಲ್ಲಾಧಿಕಾರಿ ಎಸ್. ವಿಶ್ವನಾಥನ್ ಅವರು ತಿಳಿಸಿದರು.</p>.<p>ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಅಲ್ಲಿನ ಜಿಲ್ಲಾಧಿಕಾರಿ ಮತ್ತುಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮದ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ದಲಿತ ದಂಪತಿ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಖಂಡಿಸಿದ್ದಾರೆ.</p>.<p>ರಾಹುಲ್ ಗಾಂಧಿ ಈ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ನಮ್ಮ ಹೋರಾಟ ಅನ್ಯಾಯದ ವಿರುದ್ಧ ಎಂದಿದ್ದಾರೆ.</p>.<p>‘ರಾಜಕುಮಾರ್ ಅಹಿರವಾರ್ ಮತ್ತು ಅವರ ಪತ್ನಿ ಸಾವಿತ್ರಿ ಸರ್ಕಾರಕ್ಕೆ ಸೇರಿದ್ದ ಸ್ಥಳದಲ್ಲಿ ಬೆಳೆ ಬೆಳೆದಿದ್ದರು. ಆದರೆ, ಆ ಜಾಗವನ್ನು ಕಾಲೇಜಿಗಾಗಿ ಗೊತ್ತುಪಡಿಸಲಾಗಿತ್ತು. ಹಾಗಾಗಿ ಸ್ಥಳವನ್ನು ಖಾಲಿ ಮಾಡುವಂತೆ ನಾವು ಸೂಚಿಸಿದಾಗ ಪತಿ–ಪತ್ನಿ ಕೀಟನಾಶಕವನ್ನು ಕುಡಿದಿದ್ದಾರೆ. ದಂಪತಿ ಆಸ್ಪತ್ರೆಗೆ ಬರಲು ಒಪ್ಪದಿದ್ದಾಗ ಅವರಿಬ್ಬರನ್ನು ಬಲವಂತವಾಗಿ ಕರೆದುಕೊಂಡು ಹೋಗಬೇಕಾಯಿತು ಎಂದು ಜಿಲ್ಲಾಧಿಕಾರಿ ಎಸ್. ವಿಶ್ವನಾಥನ್ ಅವರು ತಿಳಿಸಿದರು.</p>.<p>ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಅಲ್ಲಿನ ಜಿಲ್ಲಾಧಿಕಾರಿ ಮತ್ತುಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>