<p><strong>ನವದೆಹಲಿ:</strong> ಹರಿಯಾಣದಲ್ಲೂ ಮತ ಕಳ್ಳತನ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತವಾಗಿವೆ. ಹರಿಯಾಣದಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಯಾವುದೇ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.</p><p>ಬಲ್ಕ್ ಮತದಾರರ ಆರೋಪಕ್ಕೆ ಸಂಬಂಧಿಸಿದಂತೆ ಪರಿಷ್ಕರಣೆ ಸಮಯದಲ್ಲಿ ಕಾಂಗ್ರೆಸ್ನ ಬೂತ್ ಮಟ್ಟದ ಏಜೆಂಟ್ಗಳು (ಬಿಎಲ್ಎ) ಏಕೆ ದೂರು ಅಥವಾ ಆಕ್ಷೇಪಣೆಯನ್ನು ಎತ್ತಿರಲಿಲ್ಲ ಎಂದು ಹೇಳಿದೆ. </p><p>ಮತದಾನ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಕ ಮಾಡಲಾಗುತ್ತದೆ. </p><p>ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತ ಕಳ್ಳತನ ನಡೆದಿದ್ದು, ಕಾಂಗ್ರೆಸ್ನ ಗೆಲುವು ಬಿಜೆಪಿಯದ್ದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಬುಧವಾರ) ಗಂಭೀರ ಆರೋಪ ಮಾಡಿದ್ದರು. </p><p>ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ. ಇದರಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅನರ್ಹ ಮತದಾರರು ಮತ್ತು 19.26 ಲಕ್ಷ ಬಲ್ಕ್ ಮತದಾರರು ಇದ್ದರು ಎಂದು ದೂರಿದ್ದಾರೆ. </p>.ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ.ಯುವಜನರಿಗೆ ರೀಲ್ಸ್ ಚಟ ಪ್ರೋತ್ಸಾಹಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಟೀಕೆ.<p><strong>ಆರೋಪದಲ್ಲಿ ಹುರುಳಿಲ್ಲ: ರಿಜಿಜು</strong></p><p>ನವದೆಹಲಿ (ಪಿಟಿಐ): ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಕಳವು ಆಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದರು.</p><p>‘ರಾಹುಲ್ ಅವರು ತನ್ನ ವೈಫಲ್ಯಗಳನ್ನು ಮರೆ ಮಾಚಲು ಚುನಾವಣಾ ಆಯೋಗದ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ದೇಶವನ್ನೇ ಅವಮಾನಿಸುತ್ತಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ಭಾರತ ವಿರೋಧಿ ಶಕ್ತಿಗಳ ಜತೆ ಸೇರಿಕೊಂಡಿರುವ ಅವರು, ದೇಶಕ್ಕೆ ಕಳಂಕ ತರಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.</p><p>‘ಚುನಾವಣಾ ಸಮಯದಲ್ಲಿ ಜನರನ್ನು ಭೇಟಿ ಮಾಡದೆ, ವಿದೇಶಕ್ಕೆ ಹಾರುವ ರಾಹುಲ್, ಪಕ್ಷ ಸೋತ ಬಳಿಕ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ’ ಎಂದು ಸಚಿವರು ಹೇಳಿದರು.</p><p>‘ಮತದಾನದಲ್ಲಿ ಯಾವುದೇ ಅಕ್ರಮ ಕಂಡುಬಂದರೆ, ಅದನ್ನು ಚುನಾವಣಾ ಆಯೋಗ ಅಥವಾ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು. ಅದನ್ನು ಅವರು ಎಂದಿಗೂ ಮಾಡಿಲ್ಲ’ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹರಿಯಾಣದಲ್ಲೂ ಮತ ಕಳ್ಳತನ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತವಾಗಿವೆ. ಹರಿಯಾಣದಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಯಾವುದೇ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.</p><p>ಬಲ್ಕ್ ಮತದಾರರ ಆರೋಪಕ್ಕೆ ಸಂಬಂಧಿಸಿದಂತೆ ಪರಿಷ್ಕರಣೆ ಸಮಯದಲ್ಲಿ ಕಾಂಗ್ರೆಸ್ನ ಬೂತ್ ಮಟ್ಟದ ಏಜೆಂಟ್ಗಳು (ಬಿಎಲ್ಎ) ಏಕೆ ದೂರು ಅಥವಾ ಆಕ್ಷೇಪಣೆಯನ್ನು ಎತ್ತಿರಲಿಲ್ಲ ಎಂದು ಹೇಳಿದೆ. </p><p>ಮತದಾನ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಕ ಮಾಡಲಾಗುತ್ತದೆ. </p><p>ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತ ಕಳ್ಳತನ ನಡೆದಿದ್ದು, ಕಾಂಗ್ರೆಸ್ನ ಗೆಲುವು ಬಿಜೆಪಿಯದ್ದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಬುಧವಾರ) ಗಂಭೀರ ಆರೋಪ ಮಾಡಿದ್ದರು. </p><p>ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ. ಇದರಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅನರ್ಹ ಮತದಾರರು ಮತ್ತು 19.26 ಲಕ್ಷ ಬಲ್ಕ್ ಮತದಾರರು ಇದ್ದರು ಎಂದು ದೂರಿದ್ದಾರೆ. </p>.ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ.ಯುವಜನರಿಗೆ ರೀಲ್ಸ್ ಚಟ ಪ್ರೋತ್ಸಾಹಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಟೀಕೆ.<p><strong>ಆರೋಪದಲ್ಲಿ ಹುರುಳಿಲ್ಲ: ರಿಜಿಜು</strong></p><p>ನವದೆಹಲಿ (ಪಿಟಿಐ): ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಕಳವು ಆಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದರು.</p><p>‘ರಾಹುಲ್ ಅವರು ತನ್ನ ವೈಫಲ್ಯಗಳನ್ನು ಮರೆ ಮಾಚಲು ಚುನಾವಣಾ ಆಯೋಗದ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ದೇಶವನ್ನೇ ಅವಮಾನಿಸುತ್ತಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ಭಾರತ ವಿರೋಧಿ ಶಕ್ತಿಗಳ ಜತೆ ಸೇರಿಕೊಂಡಿರುವ ಅವರು, ದೇಶಕ್ಕೆ ಕಳಂಕ ತರಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.</p><p>‘ಚುನಾವಣಾ ಸಮಯದಲ್ಲಿ ಜನರನ್ನು ಭೇಟಿ ಮಾಡದೆ, ವಿದೇಶಕ್ಕೆ ಹಾರುವ ರಾಹುಲ್, ಪಕ್ಷ ಸೋತ ಬಳಿಕ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ’ ಎಂದು ಸಚಿವರು ಹೇಳಿದರು.</p><p>‘ಮತದಾನದಲ್ಲಿ ಯಾವುದೇ ಅಕ್ರಮ ಕಂಡುಬಂದರೆ, ಅದನ್ನು ಚುನಾವಣಾ ಆಯೋಗ ಅಥವಾ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು. ಅದನ್ನು ಅವರು ಎಂದಿಗೂ ಮಾಡಿಲ್ಲ’ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>