<p><strong>ಗುವಾಹಟಿ:</strong> ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದು, ನನಗಿಂತ ಮೊದಲು ಅವರು ಜೈಲಿಗೆ ಹೋಗುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದ್ದಾರೆ.</p>.ಮನುಷ್ಯರು ಪಾಪ ಮಾಡಿದ್ದರೆ ಕ್ಯಾನ್ಸರ್ ಬರುತ್ತದೆ: ಅಸ್ಸಾಂ ಸಚಿವ ಹಿಮಾಂತ ಬಿಸ್ವಾ ಸರ್ಮಾ.<p>ಇಂಥ ಹೇಳಿಕೆಗಳು ರಾಷ್ಟ್ರೀಯ ನಾಯಕರಿಗೆ ಸೂಕ್ತವಲ್ಲ ಎಂದು ಶರ್ಮಾ ಕುಟುಕಿದ್ದಾರೆ.</p><p>ಬುಧವಾರ ಗುವಾಹಟಿ ಸಮೀಪದ ಚಂಗ್ಯೋನ್ನಲ್ಲಿ ಪಕ್ಷದ ಕಾರ್ಯಕರ್ತರನ್ನಯ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಭ್ರಷ್ಟಾಚಾರಕ್ಕೆ ಹಿಮಂತ ಹಾಗೂ ಅವರ ಕುಟುಂಬಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜನರೇ ಶರ್ಮಾ ಅವರನ್ನು ಜೈಲಿಗೆ ಹಾಕಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು.</p>.ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷರಾಗಿ ಹಿಮಾಂತ ಶರ್ಮಾ ಆಯ್ಕೆ.<p>‘ರಾಜ್ಯವೊಂದಕ್ಕೆ ಬಂದು ಯಾರನ್ನು ಜೈಲಿಗೆ ಹಾಕಬೇಕು ಎಂದು ಹೇಳುವುದು ರಾಷ್ಟ್ರೀಯ ನಾಯಕನಿಗೆ ಶೋಭೆಯಲ್ಲ. ನಾನು ಎಷ್ಟು ಮುಖ್ಯ ಎಂಬುದನ್ನು ಇದು ಸಾರುತ್ತದೆ ಎಂದು ಅವರು ಹೇಳಿದ್ದಾರೆ.</p><p>ಚಾಂಗ್ಯೋನ್ನಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ನಡೆಸಿದ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಹೀಗೆ ಹೇಳಿದ್ದಾರೆ ಎಂದು, ಹಿಮಾಂತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಹಿಮಾಂತ ಹೇಳಿಕೆ ಬಳಿಕ ರಾಹುಲ್ ಗಾಂಧಿ ಸಾರ್ವಜನಿಕವಾಗಿ ಈ ಮಾತುಗಳನ್ನು ಆಡಿದ್ದರು.</p>.ಬಲಿಷ್ಠ ನಾಯಕ ಇಲ್ಲದಿದ್ದರೆ ಅಫ್ತಾಬ್ನಂಥವರು ಅಲ್ಲಲ್ಲಿ ಹುಟ್ಟುತ್ತಾರೆ: ಹಿಮಾಂತ.<p>‘ಬರೆದಿಟ್ಟುಕೊಳ್ಳಿ, ಹಿಮಾಂತ ಬಿಸ್ವ ಶರ್ಮಾ ಅವರನ್ನು ಖಂಡಿತವಾಗಿಯೂ ಜೈಲಿಗೆ ಕಳುಹಿಸಲಾಗುವುದು’ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಆಡಿತ ಮಾತುಗಳಿವು ಎಂದು ಅವರು ಬರೆದುಕೊಂಡಿದ್ದರು.</p><p>ತಮ್ಮ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ ಎನ್ನುವುದನ್ನು ರಾಹುಲ್ ಗಾಂಧಿ ಮನಃಪೂರ್ವಕವಾಗಿ ಮರೆತಂತಿದೆ ಎಂದು ಹೇಳಿದ್ದಾರೆ.</p> .'ಪ್ರಧಾನ ಮಂತ್ರಿ ಅಮಿತ್ ಶಾ' ಎಂದ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದು, ನನಗಿಂತ ಮೊದಲು ಅವರು ಜೈಲಿಗೆ ಹೋಗುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದ್ದಾರೆ.</p>.ಮನುಷ್ಯರು ಪಾಪ ಮಾಡಿದ್ದರೆ ಕ್ಯಾನ್ಸರ್ ಬರುತ್ತದೆ: ಅಸ್ಸಾಂ ಸಚಿವ ಹಿಮಾಂತ ಬಿಸ್ವಾ ಸರ್ಮಾ.<p>ಇಂಥ ಹೇಳಿಕೆಗಳು ರಾಷ್ಟ್ರೀಯ ನಾಯಕರಿಗೆ ಸೂಕ್ತವಲ್ಲ ಎಂದು ಶರ್ಮಾ ಕುಟುಕಿದ್ದಾರೆ.</p><p>ಬುಧವಾರ ಗುವಾಹಟಿ ಸಮೀಪದ ಚಂಗ್ಯೋನ್ನಲ್ಲಿ ಪಕ್ಷದ ಕಾರ್ಯಕರ್ತರನ್ನಯ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಭ್ರಷ್ಟಾಚಾರಕ್ಕೆ ಹಿಮಂತ ಹಾಗೂ ಅವರ ಕುಟುಂಬಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜನರೇ ಶರ್ಮಾ ಅವರನ್ನು ಜೈಲಿಗೆ ಹಾಕಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು.</p>.ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷರಾಗಿ ಹಿಮಾಂತ ಶರ್ಮಾ ಆಯ್ಕೆ.<p>‘ರಾಜ್ಯವೊಂದಕ್ಕೆ ಬಂದು ಯಾರನ್ನು ಜೈಲಿಗೆ ಹಾಕಬೇಕು ಎಂದು ಹೇಳುವುದು ರಾಷ್ಟ್ರೀಯ ನಾಯಕನಿಗೆ ಶೋಭೆಯಲ್ಲ. ನಾನು ಎಷ್ಟು ಮುಖ್ಯ ಎಂಬುದನ್ನು ಇದು ಸಾರುತ್ತದೆ ಎಂದು ಅವರು ಹೇಳಿದ್ದಾರೆ.</p><p>ಚಾಂಗ್ಯೋನ್ನಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ನಡೆಸಿದ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಹೀಗೆ ಹೇಳಿದ್ದಾರೆ ಎಂದು, ಹಿಮಾಂತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಹಿಮಾಂತ ಹೇಳಿಕೆ ಬಳಿಕ ರಾಹುಲ್ ಗಾಂಧಿ ಸಾರ್ವಜನಿಕವಾಗಿ ಈ ಮಾತುಗಳನ್ನು ಆಡಿದ್ದರು.</p>.ಬಲಿಷ್ಠ ನಾಯಕ ಇಲ್ಲದಿದ್ದರೆ ಅಫ್ತಾಬ್ನಂಥವರು ಅಲ್ಲಲ್ಲಿ ಹುಟ್ಟುತ್ತಾರೆ: ಹಿಮಾಂತ.<p>‘ಬರೆದಿಟ್ಟುಕೊಳ್ಳಿ, ಹಿಮಾಂತ ಬಿಸ್ವ ಶರ್ಮಾ ಅವರನ್ನು ಖಂಡಿತವಾಗಿಯೂ ಜೈಲಿಗೆ ಕಳುಹಿಸಲಾಗುವುದು’ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಆಡಿತ ಮಾತುಗಳಿವು ಎಂದು ಅವರು ಬರೆದುಕೊಂಡಿದ್ದರು.</p><p>ತಮ್ಮ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ ಎನ್ನುವುದನ್ನು ರಾಹುಲ್ ಗಾಂಧಿ ಮನಃಪೂರ್ವಕವಾಗಿ ಮರೆತಂತಿದೆ ಎಂದು ಹೇಳಿದ್ದಾರೆ.</p> .'ಪ್ರಧಾನ ಮಂತ್ರಿ ಅಮಿತ್ ಶಾ' ಎಂದ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>