<p><strong>ಪಟ್ನಾ</strong>: ಎನ್ಎಸ್ಯುಐ ಉಸ್ತುವಾರಿ ಕನ್ಹಯ್ಯ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪಾಲ್ಗೊಂಡರು.</p><p>ಬಿಹಾರದ ಬೆಗೂಸರಾಯದಲ್ಲಿ ನಡೆಯುತ್ತಿರುವ ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾದ (ಪಲಾಯನ ನಿಲ್ಲಿಸಿ, ಕೆಲಸ ಕೊಡಿ) ಪಾದಯಾತ್ರೆಯಲ್ಲಿ ಬಿಳಿ ಟಿ-ಶರ್ಟ್ ಧರಿಸಿ ರಾಹುಲ್ ಭಾಗಿಯಾದರು.</p><p>ಈ ವರ್ಷ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ನೀಡಲಾಗಿದೆ ಎನ್ನಲಾಗಿದೆ.</p>.ಮಾರುಕಟ್ಟೆ ಮಹಾಪತನ: ಹೂಡಿಕೆದಾರರಿಗೆ ಕೆಲವೇ ನಿಮಿಷಗಳಲ್ಲಿ ₹20 ಲಕ್ಷ ಕೋಟಿ ನಷ್ಟ.ಅಮೆರಿಕ: ಡೊನಾಲ್ಡ್ ಟ್ರಂಪ್ ಸರ್ಕಾರದ ನೀತಿ ವಿರೋಧಿಸಿ ಬೀದಿಗಿಳಿದ ಜನ . <p>ಇಂದು ಬೆಳಿಗ್ಗೆ ಪಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಪಕ್ಷದ ನಾಯಕರು ಬರಮಾಡಿಕೊಂಡರು.</p><p>ಇಂದು ಪಟ್ನಾದಲ್ಲಿ 'ಸಂವಿಧಾನ ಸುರಕ್ಷಾ ಸಮ್ಮೇಳನ' ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಹುಲ್ ಮಾತನಾಡಲಿದ್ದಾರೆ. </p><p>‘ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ನಾನು ಬಿಹಾರದ ಬೆಗೂಸರಾಯಕ್ಕೆ ಬರುತ್ತಿದ್ದೇನೆ. ಉದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಸರ್ಕಾರದ ಬಣ್ಣ ಬಯಲು ಮಾಡಲು ಬಿಳಿ ಅಂಗಿ ತೊಟ್ಟು ಈ ಚಳವಳಿಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಭಾನುವಾರ ಕಾರ್ಯಕರ್ತರಿಗೆ, ಯುವಕರಿಗೆ ಮನವಿ ಮಾಡಿದ್ದರು.</p><p>ರಾಜ್ಯದಲ್ಲಿ ಉದ್ಯೋಗ ಮತ್ತು ವಲಸೆ ವಿಚಾರಗಳನ್ನು ಮುಂದಿಟ್ಟುಕೊಂಡು ಕನ್ಹಯ್ಯ ಕುಮಾರ್ ಮಾರ್ಚ್ 16ರಿಂದ ರಾಜ್ಯದಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.</p>.ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಶಾಸಕದ್ವಯರಿಗೆ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ.ಆಕ್ಷೇಪಾರ್ಹ ಹೇಳಿಕೆ | FIR ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೊರೆ ಹೋದ ಕಾಮ್ರಾ.ಟ್ರಂಪ್ ತೆರಿಗೆ | ಜಾಗತಿಕ ಮಾರುಕಟ್ಟೆ ತತ್ತರ: ಸೆನ್ಸೆಕ್ಸ್, ನಿಫ್ಟಿ ಮಹಾ ಕುಸಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಎನ್ಎಸ್ಯುಐ ಉಸ್ತುವಾರಿ ಕನ್ಹಯ್ಯ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪಾಲ್ಗೊಂಡರು.</p><p>ಬಿಹಾರದ ಬೆಗೂಸರಾಯದಲ್ಲಿ ನಡೆಯುತ್ತಿರುವ ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾದ (ಪಲಾಯನ ನಿಲ್ಲಿಸಿ, ಕೆಲಸ ಕೊಡಿ) ಪಾದಯಾತ್ರೆಯಲ್ಲಿ ಬಿಳಿ ಟಿ-ಶರ್ಟ್ ಧರಿಸಿ ರಾಹುಲ್ ಭಾಗಿಯಾದರು.</p><p>ಈ ವರ್ಷ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ನೀಡಲಾಗಿದೆ ಎನ್ನಲಾಗಿದೆ.</p>.ಮಾರುಕಟ್ಟೆ ಮಹಾಪತನ: ಹೂಡಿಕೆದಾರರಿಗೆ ಕೆಲವೇ ನಿಮಿಷಗಳಲ್ಲಿ ₹20 ಲಕ್ಷ ಕೋಟಿ ನಷ್ಟ.ಅಮೆರಿಕ: ಡೊನಾಲ್ಡ್ ಟ್ರಂಪ್ ಸರ್ಕಾರದ ನೀತಿ ವಿರೋಧಿಸಿ ಬೀದಿಗಿಳಿದ ಜನ . <p>ಇಂದು ಬೆಳಿಗ್ಗೆ ಪಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಪಕ್ಷದ ನಾಯಕರು ಬರಮಾಡಿಕೊಂಡರು.</p><p>ಇಂದು ಪಟ್ನಾದಲ್ಲಿ 'ಸಂವಿಧಾನ ಸುರಕ್ಷಾ ಸಮ್ಮೇಳನ' ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಹುಲ್ ಮಾತನಾಡಲಿದ್ದಾರೆ. </p><p>‘ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ನಾನು ಬಿಹಾರದ ಬೆಗೂಸರಾಯಕ್ಕೆ ಬರುತ್ತಿದ್ದೇನೆ. ಉದ್ಯೋಗ ಮತ್ತು ವಲಸೆ ಸಮಸ್ಯೆಗಳ ಕುರಿತು ಸರ್ಕಾರದ ಬಣ್ಣ ಬಯಲು ಮಾಡಲು ಬಿಳಿ ಅಂಗಿ ತೊಟ್ಟು ಈ ಚಳವಳಿಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಭಾನುವಾರ ಕಾರ್ಯಕರ್ತರಿಗೆ, ಯುವಕರಿಗೆ ಮನವಿ ಮಾಡಿದ್ದರು.</p><p>ರಾಜ್ಯದಲ್ಲಿ ಉದ್ಯೋಗ ಮತ್ತು ವಲಸೆ ವಿಚಾರಗಳನ್ನು ಮುಂದಿಟ್ಟುಕೊಂಡು ಕನ್ಹಯ್ಯ ಕುಮಾರ್ ಮಾರ್ಚ್ 16ರಿಂದ ರಾಜ್ಯದಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.</p>.ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಶಾಸಕದ್ವಯರಿಗೆ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ.ಆಕ್ಷೇಪಾರ್ಹ ಹೇಳಿಕೆ | FIR ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೊರೆ ಹೋದ ಕಾಮ್ರಾ.ಟ್ರಂಪ್ ತೆರಿಗೆ | ಜಾಗತಿಕ ಮಾರುಕಟ್ಟೆ ತತ್ತರ: ಸೆನ್ಸೆಕ್ಸ್, ನಿಫ್ಟಿ ಮಹಾ ಕುಸಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>