<p><strong>ನವದೆಹಲಿ:</strong> ‘ಕೇರಳದ ಜನರು ಬದಲಾವಣೆ ತರಲು ಸನ್ನದ್ಧರಾಗಿದ್ದಾರೆ’ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಯುಡಿಎಫ್ (ಸಂಯುಕ್ತ ಪ್ರಜಾಸತ್ತಾತ್ಮಕ ರಂಗ) ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ತಮ್ಮ ‘ಎಕ್ಸ್’ ಖಾತೆಯಲ್ಲಿ ‘ ಟೀಂ ಯುಡಿಎಫ್ ಈಸ್ ಟೀಂ ಕೇರಳಂ’ ಎಂದು ಪೋಸ್ಟ್ ಮಾಡಿರುವ ಅವರು, ‘ ನಮ್ಮ ಪ್ರತಿಯೊಬ್ಬ ಅಭ್ಯರ್ಥಿಯೂ ಕೇರಳದ ಧ್ವನಿ, ಆಕಾಂಕ್ಷೆ ಮತ್ತು ಜನರ ನಂಬಿಕೆಯನ್ನು ಪ್ರತಿಬಿಂಬಿಸಲಿದ್ದಾರೆ’ ಎಂದಿದ್ದಾರೆ.</p>.<p>‘ಕೇರಳ ನನಗೆ ಮನೆ, ಕೇರಳಿಗರು ನನ್ನ ಕುಟುಂಬ ಇದ್ದಂತೆ. ಅವರು ನನಗೆ ನೀಡಿದ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ಯಾವತ್ತೂ ಅವರ ಪಾಲುದಾರ’ ಎಂದಿದ್ದಾರೆ.</p>.<p>‘ಯಾರು ತಮ್ಮನ್ನು ಆಲಿಸುತ್ತಾರೊ, ಅರ್ಥಮಾಡಿಕೊಳ್ಳುತ್ತಾರೊ ಮತ್ತು ಪ್ರಾಮಾಣಿಕತೆಯಿಂದ ಸ್ಪಂದಿಸುತ್ತಾರೊ ಅಂಥವರ ಸರ್ಕಾರವನ್ನು ಕೇರಳ ಬಯಸುತ್ತಿದೆ. ಯುಡಿಎಫ್ ಜೊತೆಗೂಡಿ ಭವಿಷ್ಯದ, ಸುಂದರ ರಾಜ್ಯ ಕಟ್ಟಲು ನಾನು ಸಿದ್ಧ’ ಎಂದು ಅವರು ಹೇಳಿದ್ದಾರೆ.</p>.<p>ಏಪ್ರಿಲ್ 9ರಂದು ನಡೆಯುವ ವಿಧಾನಸಭೆ ಚುನಾವಣೆಗೆ ತಾನು ಸ್ಪರ್ಧಿಸುವ 92 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಂತರ ರಾಹುಲ್ ಅವರು ಈ ಪೋಸ್ಟ್ ಮಾಡಿದ್ದಾರೆ.</p>.<p>ಸಂಸದರಿಗೆ ಟಿಕೆಟ್ ಇಲ್ಲ: ಆಡಳಿತಾರೂಢ ಎಲ್ಡಿಎಫ್ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕೆಲ ಸಂಸದರಿಗೂ ಟಿಕೆಟ್ ನೀಡಲಿದೆ ಎಂಬ ಚರ್ಚೆಗಳಿದ್ದವು. ಆದರೆ ಯಾವುದೇ ಸಂಸದರನ್ನು ಕಣಕ್ಕಿಳಿಸಿಲ್ಲ.</p>.<p>ಕೇರಳದಲ್ಲಿ ಕಳೆದ 10 ವರ್ಷಗಳಿಂದಲೂ ಕಾಂಗ್ರೆಸ್ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇರಳದ ಜನರು ಬದಲಾವಣೆ ತರಲು ಸನ್ನದ್ಧರಾಗಿದ್ದಾರೆ’ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಯುಡಿಎಫ್ (ಸಂಯುಕ್ತ ಪ್ರಜಾಸತ್ತಾತ್ಮಕ ರಂಗ) ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ತಮ್ಮ ‘ಎಕ್ಸ್’ ಖಾತೆಯಲ್ಲಿ ‘ ಟೀಂ ಯುಡಿಎಫ್ ಈಸ್ ಟೀಂ ಕೇರಳಂ’ ಎಂದು ಪೋಸ್ಟ್ ಮಾಡಿರುವ ಅವರು, ‘ ನಮ್ಮ ಪ್ರತಿಯೊಬ್ಬ ಅಭ್ಯರ್ಥಿಯೂ ಕೇರಳದ ಧ್ವನಿ, ಆಕಾಂಕ್ಷೆ ಮತ್ತು ಜನರ ನಂಬಿಕೆಯನ್ನು ಪ್ರತಿಬಿಂಬಿಸಲಿದ್ದಾರೆ’ ಎಂದಿದ್ದಾರೆ.</p>.<p>‘ಕೇರಳ ನನಗೆ ಮನೆ, ಕೇರಳಿಗರು ನನ್ನ ಕುಟುಂಬ ಇದ್ದಂತೆ. ಅವರು ನನಗೆ ನೀಡಿದ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ಯಾವತ್ತೂ ಅವರ ಪಾಲುದಾರ’ ಎಂದಿದ್ದಾರೆ.</p>.<p>‘ಯಾರು ತಮ್ಮನ್ನು ಆಲಿಸುತ್ತಾರೊ, ಅರ್ಥಮಾಡಿಕೊಳ್ಳುತ್ತಾರೊ ಮತ್ತು ಪ್ರಾಮಾಣಿಕತೆಯಿಂದ ಸ್ಪಂದಿಸುತ್ತಾರೊ ಅಂಥವರ ಸರ್ಕಾರವನ್ನು ಕೇರಳ ಬಯಸುತ್ತಿದೆ. ಯುಡಿಎಫ್ ಜೊತೆಗೂಡಿ ಭವಿಷ್ಯದ, ಸುಂದರ ರಾಜ್ಯ ಕಟ್ಟಲು ನಾನು ಸಿದ್ಧ’ ಎಂದು ಅವರು ಹೇಳಿದ್ದಾರೆ.</p>.<p>ಏಪ್ರಿಲ್ 9ರಂದು ನಡೆಯುವ ವಿಧಾನಸಭೆ ಚುನಾವಣೆಗೆ ತಾನು ಸ್ಪರ್ಧಿಸುವ 92 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಂತರ ರಾಹುಲ್ ಅವರು ಈ ಪೋಸ್ಟ್ ಮಾಡಿದ್ದಾರೆ.</p>.<p>ಸಂಸದರಿಗೆ ಟಿಕೆಟ್ ಇಲ್ಲ: ಆಡಳಿತಾರೂಢ ಎಲ್ಡಿಎಫ್ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕೆಲ ಸಂಸದರಿಗೂ ಟಿಕೆಟ್ ನೀಡಲಿದೆ ಎಂಬ ಚರ್ಚೆಗಳಿದ್ದವು. ಆದರೆ ಯಾವುದೇ ಸಂಸದರನ್ನು ಕಣಕ್ಕಿಳಿಸಿಲ್ಲ.</p>.<p>ಕೇರಳದಲ್ಲಿ ಕಳೆದ 10 ವರ್ಷಗಳಿಂದಲೂ ಕಾಂಗ್ರೆಸ್ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>