<p><strong>ನವದೆಹಲಿ</strong>: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಮಸೂದೆಯನ್ನು ಮಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.</p><p>ಕಾಂಗ್ರೆಸ್ನ ಸಂಸದೀಯ ಕಾರ್ಯತಂತ್ರದ ತಂಡದ ಸಭೆಯ ಬೆನ್ನಲ್ಲೇ ಈ ಪತ್ರವನ್ನು ಕಳುಹಿಸಲಾಗಿದೆ. ಪಹಲ್ಗಾಮ್ನಲ್ಲಿ ಗುಪ್ತಚರ ವೈಫಲ್ಯ, ಮಣಿಪುರದ ಪರಿಸ್ಥಿತಿ ಮುಂತಾದ ಸಮಸ್ಯೆಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಕೇಂದ್ರದ ಮುಂದೆ ಪ್ರಸ್ತಾಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.</p><p>‘ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಕಳೆದ ಐದು ವರ್ಷಗಳಿಂದ ಅಲ್ಲಿನ ಜನರು ಹೋರಾಡುತ್ತಿದ್ದಾರೆ. ಇದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ. ಅಲ್ಲದೇ ಇದು ಅವರ ಸಾಂವಿಧಾನಿಕ ಹಕ್ಕಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p><p>ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಸರ್ಕಾರದ ಬದ್ಥತೆ ಬಗ್ಗೆ ಪ್ರಧಾನಿ ಮೋದಿ ಅವರು ಹಲವು ಸಂದರ್ಭಗಳಲ್ಲಿ ಮಾತನಾಡಿರುವ ಬಗ್ಗೆಯೂ ಇಲ್ಲಿ ಪ್ರಸ್ತಾಪಿಸಲಾಗಿದೆ.</p><p>ಇದೇ ವೇಳೆ, ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸುವಂತೆಯೂ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಮಸೂದೆಯನ್ನು ಮಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.</p><p>ಕಾಂಗ್ರೆಸ್ನ ಸಂಸದೀಯ ಕಾರ್ಯತಂತ್ರದ ತಂಡದ ಸಭೆಯ ಬೆನ್ನಲ್ಲೇ ಈ ಪತ್ರವನ್ನು ಕಳುಹಿಸಲಾಗಿದೆ. ಪಹಲ್ಗಾಮ್ನಲ್ಲಿ ಗುಪ್ತಚರ ವೈಫಲ್ಯ, ಮಣಿಪುರದ ಪರಿಸ್ಥಿತಿ ಮುಂತಾದ ಸಮಸ್ಯೆಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಕೇಂದ್ರದ ಮುಂದೆ ಪ್ರಸ್ತಾಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.</p><p>‘ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಕಳೆದ ಐದು ವರ್ಷಗಳಿಂದ ಅಲ್ಲಿನ ಜನರು ಹೋರಾಡುತ್ತಿದ್ದಾರೆ. ಇದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ. ಅಲ್ಲದೇ ಇದು ಅವರ ಸಾಂವಿಧಾನಿಕ ಹಕ್ಕಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p><p>ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಸರ್ಕಾರದ ಬದ್ಥತೆ ಬಗ್ಗೆ ಪ್ರಧಾನಿ ಮೋದಿ ಅವರು ಹಲವು ಸಂದರ್ಭಗಳಲ್ಲಿ ಮಾತನಾಡಿರುವ ಬಗ್ಗೆಯೂ ಇಲ್ಲಿ ಪ್ರಸ್ತಾಪಿಸಲಾಗಿದೆ.</p><p>ಇದೇ ವೇಳೆ, ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸುವಂತೆಯೂ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>