<p><strong>ಪಟ್ನಾ/ಅರರಿಯ:</strong> ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ಒಳನುಸುಳುಕೋರರ ಮತದಾನದ ಹಕ್ಕನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.</p><p>ಅರರಿಯ ಜಿಲ್ಲೆಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p><p>ಬಿಹಾರದಲ್ಲಿ ಶೀಘ್ರದಲ್ಲಿಯೇ ವಿಧಾನಸಭೆ ಚುನಾವಣೆ ಘೋಷಣೆ ಯಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತ ರನ್ನು ಉದ್ದೇಶಿಸಿ ಎರಡು ದಿನಗಳಿಂದ ಸಭೆಗಳನ್ನು ನಡೆಸಿದ್ದರು. ಮುಸ್ಲಿಂ ಜನಸಂಖ್ಯೆ ಅಧಿಕವಿರುವ ರಾಜ್ಯದ ಸೀಮಾಂಚಲ ಪ್ರದೇಶದ ಕಾರ್ಯಕ್ರತರೇ ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.</p><p>‘ಮತದಾರರ ಪಟ್ಟಿಯಿಂದ ಒಳನುಸುಳುಕೋರರ ಹೆಸರನ್ನು ತೆಗೆದು ಹಾಕಲು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಚುನಾವಣಾ ಆಯೋಗ ಕೈಗೊಂಡಿತ್ತು. ಇದನ್ನೇ ವಿರೋಧಿಸಿ ರಾಹುಲ್ ಅವರು ಇತ್ತೀಚೆಗೆ ಇಲ್ಲಿ ಯಾತ್ರೆ ನಡೆಸಿದ್ದರು’ ಎಂದರು.</p><p>‘ಒಳನುಸುಳುಕೋರರ ಮತದಾನದ ಹಕ್ಕನ್ನು ರಕ್ಷಿಸಿಕೊಳ್ಳಲು ರಾಹುಲ್, ಲಾಲು ಮತ್ತವರ ಕೂಟ ಯತ್ನಿಸುತ್ತಿದೆ. ಸೀಮಾಂಚಲ ಪ್ರದೇಶದ ನಿಮ್ಮನ್ನು ಕೇಳುತ್ತಿದ್ದೇನೆ. ನೀವು ಇದಕ್ಕೆ ಅನುವು ಮಾಡಿಕೊಡುತ್ತೀರೇ?’ ಎಂದು ಶಾ ಅವರು ಕಾರ್ಯಕರ್ತರನ್ನು ಕೇಳಿದರು. ಇದಕ್ಕೆ ‘ಇಲ್ಲ’ ಎಂದು ದೊಡ್ಡ ಸ್ವರದಲ್ಲಿ ಕಾರ್ಯಕರ್ತರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ/ಅರರಿಯ:</strong> ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ಒಳನುಸುಳುಕೋರರ ಮತದಾನದ ಹಕ್ಕನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.</p><p>ಅರರಿಯ ಜಿಲ್ಲೆಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p><p>ಬಿಹಾರದಲ್ಲಿ ಶೀಘ್ರದಲ್ಲಿಯೇ ವಿಧಾನಸಭೆ ಚುನಾವಣೆ ಘೋಷಣೆ ಯಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತ ರನ್ನು ಉದ್ದೇಶಿಸಿ ಎರಡು ದಿನಗಳಿಂದ ಸಭೆಗಳನ್ನು ನಡೆಸಿದ್ದರು. ಮುಸ್ಲಿಂ ಜನಸಂಖ್ಯೆ ಅಧಿಕವಿರುವ ರಾಜ್ಯದ ಸೀಮಾಂಚಲ ಪ್ರದೇಶದ ಕಾರ್ಯಕ್ರತರೇ ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.</p><p>‘ಮತದಾರರ ಪಟ್ಟಿಯಿಂದ ಒಳನುಸುಳುಕೋರರ ಹೆಸರನ್ನು ತೆಗೆದು ಹಾಕಲು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಚುನಾವಣಾ ಆಯೋಗ ಕೈಗೊಂಡಿತ್ತು. ಇದನ್ನೇ ವಿರೋಧಿಸಿ ರಾಹುಲ್ ಅವರು ಇತ್ತೀಚೆಗೆ ಇಲ್ಲಿ ಯಾತ್ರೆ ನಡೆಸಿದ್ದರು’ ಎಂದರು.</p><p>‘ಒಳನುಸುಳುಕೋರರ ಮತದಾನದ ಹಕ್ಕನ್ನು ರಕ್ಷಿಸಿಕೊಳ್ಳಲು ರಾಹುಲ್, ಲಾಲು ಮತ್ತವರ ಕೂಟ ಯತ್ನಿಸುತ್ತಿದೆ. ಸೀಮಾಂಚಲ ಪ್ರದೇಶದ ನಿಮ್ಮನ್ನು ಕೇಳುತ್ತಿದ್ದೇನೆ. ನೀವು ಇದಕ್ಕೆ ಅನುವು ಮಾಡಿಕೊಡುತ್ತೀರೇ?’ ಎಂದು ಶಾ ಅವರು ಕಾರ್ಯಕರ್ತರನ್ನು ಕೇಳಿದರು. ಇದಕ್ಕೆ ‘ಇಲ್ಲ’ ಎಂದು ದೊಡ್ಡ ಸ್ವರದಲ್ಲಿ ಕಾರ್ಯಕರ್ತರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>