<p><strong>ಭೋಪಾಲ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿದೆ.</p><p>ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕೂಡ ಇದ್ದರು.</p>.ಮಾ. 10ರಂದು ಮಹಾರಾಷ್ಟ್ರ ಪ್ರವೇಶಿಸಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆ .<p>ಮೊರೆನಾ ನಗರದ ಭೀಮರಾಮ್ ಅಂಬೇಡ್ಕರ್ ಸ್ಟೇಡಿಯಂನಲ್ಲಿ ಧ್ವಜ ಹಸ್ತಾಂತರ ಸಮಾರಂಭ ನಡೆಯಿತು.</p><p>ಗ್ವಾಲಿಯರ್ನಲ್ಲಿ ಸಂಜೆ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ಹಜೀರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಕೆ. ಮಿಶ್ರಾ ಹೇಳಿದ್ದಾರೆ.</p><p>ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.</p> .ಮಾ.2ರಂದು ಮಧ್ಯಪ್ರದೇಶ ಪ್ರವೇಶಿಸಲಿರುವ ನ್ಯಾಯ ಯಾತ್ರೆ: ಮಾ.6ರ ವರೆಗೆ ಸಂಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿದೆ.</p><p>ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕೂಡ ಇದ್ದರು.</p>.ಮಾ. 10ರಂದು ಮಹಾರಾಷ್ಟ್ರ ಪ್ರವೇಶಿಸಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆ .<p>ಮೊರೆನಾ ನಗರದ ಭೀಮರಾಮ್ ಅಂಬೇಡ್ಕರ್ ಸ್ಟೇಡಿಯಂನಲ್ಲಿ ಧ್ವಜ ಹಸ್ತಾಂತರ ಸಮಾರಂಭ ನಡೆಯಿತು.</p><p>ಗ್ವಾಲಿಯರ್ನಲ್ಲಿ ಸಂಜೆ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ಹಜೀರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಕೆ. ಮಿಶ್ರಾ ಹೇಳಿದ್ದಾರೆ.</p><p>ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.</p> .ಮಾ.2ರಂದು ಮಧ್ಯಪ್ರದೇಶ ಪ್ರವೇಶಿಸಲಿರುವ ನ್ಯಾಯ ಯಾತ್ರೆ: ಮಾ.6ರ ವರೆಗೆ ಸಂಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>