ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ. 10ರಂದು ಮಹಾರಾಷ್ಟ್ರ ಪ್ರವೇಶಿಸಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆ

ಮಾ. 10ರಂದು ನಂದುರ್ಬಾರ್‌ ಜಿಲ್ಲೆಗೆ ಪ್ರವೇಶಿಸಲಿರುವ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’
Published 1 ಮಾರ್ಚ್ 2024, 14:18 IST
Last Updated 1 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ಮುಂಬೈ: ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ಯು ಮಾರ್ಚ್‌ 10ರಂದು ಗುಜರಾತ್‌ನಿಂದ ಮಹಾರಾಷ್ಟ್ರದ ನಂದುರ್ಬಾರ್‌ ಜಿಲ್ಲೆಯನ್ನು ಪ್ರವೇಶಿಸಲಿದೆ’ ಎಂದು ಪಕ್ಷದ ಸ್ಥಳೀಯ ಕಾರ್ಯಕರ್ತರು ಶುಕ್ರವಾರ ಹೇಳಿದ್ದಾರೆ.

‘ನಂದುರ್ಬಾರ್‌ನಿಂದ ಧುಲೆ, ಮಾಲೆಗಾಂವ್‌, ನಾಸಿಕ್ ಮೂಲಕ ಯಾತ್ರೆ ಸಾಗಲಿದೆ. ಯಾತ್ರೆಯ ವೇಳೆ ಕಾಲಾರಾಮ್‌ನ ರಾಮ ಮಂದಿರದಲ್ಲಿ ಹಾಗೂ ತ್ರಯಂಬಕೇಶ್ವರದ ಶಿವ ಮಂದಿರದಲ್ಲಿ ರಾಹುಲ್‌ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಠಾಣೆಯ ಭಿವಂಡಿಯಲ್ಲಿ ನಡೆಯಲಿರುವ ರ್‍ಯಾಲಿಯಲ್ಲಿ ರಾಹುಲ್‌ ಅವರು ಭಾಷಣ ಮಾಡಲಿದ್ದಾರೆ. ಬಳಿಕ ಯಾತ್ರೆಯು ಮುಂಬೈನಲ್ಲಿ ಮಾರ್ಚ್‌ 13 ಅಥವಾ 14ರಂದು ಸಮಾರೋಪಗೊಳ್ಳಲಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT