<p><strong>ನುಹ್ಹ್ (ಹರಿಯಾಣ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿತು.</p>.<p>ರಾಜಸ್ಥಾನ ಗಡಿಯಲ್ಲಿರುವ ನುಹ್ಹ್ ಬಳಿ ಪಾದಯಾತ್ರೆ ಹರಿಯಾಣ ಪ್ರವೇಶಿಸಿತು. ಈ ವೇಳೆ ಹರಿಯಾಣದ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದು ಪಾದಯಾತ್ರೆ ಹಾಗೂ ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ, ರಂದೀಪ್ ಸಿಂಗ್ ಸುರ್ಜೆವಾಲಾ, ದೀಪೇಂದ್ರ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಬಾನ್ ಹಾಜರಿದ್ದರು.</p>.<p>ಪಾದಯಾತ್ರೆಯು ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ಎರಡು ಹಂತಗಳಲ್ಲಿ ಪ್ರವೇಶ ಮಾಡಲಿದೆ. ಇಂದು ಆಗಮಿಸಿದ ಪಾದಯಾತ್ರೆ ಡಿಸೆಂಬರ್ 23ರಂದು ರಾಜ್ಯದಿಂದ ಹೊರಹೋಗಿ ಮತ್ತೆ ಉತ್ತರ ಪ್ರದೇಶದಿಂದ ಬರುವಾಗ ಪಾಣಿಪತ್ ಮಾರ್ಗವಾಗಿ ಜನವರಿ 6ರಂದು ಮತ್ತೊಮ್ಮೆ ಹರಿಯಾಣ ಪ್ರವೇಶಿಸಲಿದೆ.</p>.<p>ಯಾತ್ರೆಯು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ 15 ದಿನದಲ್ಲಿ 485 ಕಿಮೀ ಕ್ರಮಿಸಿತು.ಭಾರತ್ ಜೋಡೊ ಪಾದಯಾತ್ರೆ ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿದೆ.</p>.<p><a href="https://www.prajavani.net/india-news/all-you-need-to-need-to-know-about-fifth-scorp%C3%A8ne-class-submarine-vagir-delivered-to-indian-navy-999098.html" itemprop="url">ಸ್ಕಾರ್ಪೀನ್ ಸರಣಿಯ 5ನೇ ಜಲಾಂತರ್ಗಾಮಿ ‘ವಾಗೀರ್’ ಕರ್ತವ್ಯಕ್ಕೆ ಹಾಜರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಹ್ಹ್ (ಹರಿಯಾಣ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿತು.</p>.<p>ರಾಜಸ್ಥಾನ ಗಡಿಯಲ್ಲಿರುವ ನುಹ್ಹ್ ಬಳಿ ಪಾದಯಾತ್ರೆ ಹರಿಯಾಣ ಪ್ರವೇಶಿಸಿತು. ಈ ವೇಳೆ ಹರಿಯಾಣದ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದು ಪಾದಯಾತ್ರೆ ಹಾಗೂ ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ, ರಂದೀಪ್ ಸಿಂಗ್ ಸುರ್ಜೆವಾಲಾ, ದೀಪೇಂದ್ರ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಬಾನ್ ಹಾಜರಿದ್ದರು.</p>.<p>ಪಾದಯಾತ್ರೆಯು ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ಎರಡು ಹಂತಗಳಲ್ಲಿ ಪ್ರವೇಶ ಮಾಡಲಿದೆ. ಇಂದು ಆಗಮಿಸಿದ ಪಾದಯಾತ್ರೆ ಡಿಸೆಂಬರ್ 23ರಂದು ರಾಜ್ಯದಿಂದ ಹೊರಹೋಗಿ ಮತ್ತೆ ಉತ್ತರ ಪ್ರದೇಶದಿಂದ ಬರುವಾಗ ಪಾಣಿಪತ್ ಮಾರ್ಗವಾಗಿ ಜನವರಿ 6ರಂದು ಮತ್ತೊಮ್ಮೆ ಹರಿಯಾಣ ಪ್ರವೇಶಿಸಲಿದೆ.</p>.<p>ಯಾತ್ರೆಯು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ 15 ದಿನದಲ್ಲಿ 485 ಕಿಮೀ ಕ್ರಮಿಸಿತು.ಭಾರತ್ ಜೋಡೊ ಪಾದಯಾತ್ರೆ ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿದೆ.</p>.<p><a href="https://www.prajavani.net/india-news/all-you-need-to-need-to-know-about-fifth-scorp%C3%A8ne-class-submarine-vagir-delivered-to-indian-navy-999098.html" itemprop="url">ಸ್ಕಾರ್ಪೀನ್ ಸರಣಿಯ 5ನೇ ಜಲಾಂತರ್ಗಾಮಿ ‘ವಾಗೀರ್’ ಕರ್ತವ್ಯಕ್ಕೆ ಹಾಜರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>