ಕೋಲ್ಕತ್ತ: ಬಿಜೆಪಿ ವಿರೋಧಿ ಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸುವ ಮಮತಾ ಬ್ಯಾನರ್ಜಿ ಪ್ರಯತ್ನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ರ್ಯಾಲಿಯ ಬಗ್ಗೆರಾಹುಲ್ ಮೌನವಾಗಿದ್ದದ್ದು ಊಹಾಪೋಹಗಳಿಗೆ ಕಾರಣವಾಗಿತ್ತು. ಆದರೆ,ರಾಹುಲ್ ಅವರು ಮಮತಾ ಅವರಿಗೆ ಶುಕ್ರವಾರ ಪತ್ರ ಬರೆದು ಬೆಂಬಲ ಸೂಚಿಸಿದ್ದಾರೆ.