<p><strong>ಹೈದರಾಬಾದ್:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇಲ್ಲಿನ ಚಂಚಲಗುಡ ಜೈಲಿಗೆ ತೆರಳಿ ಎನ್ಎಸ್ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ/ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ) ನಾಯಕರನ್ನು ಭೇಟಿ ಮಾಡಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷವು ಅನ್ಯಾಯದ ವಿರುದ್ಧ ನಿಸ್ವಾರ್ಥ ಹೋರಾಟ ನಡೆಸುತ್ತಿರುವ ಕಾರ್ಯಕರ್ತರಿಗೆ ಸಮರ್ಪಿತವಾಗಿದೆ. ನಾನು ಸದಾ ಅವರೊಂದಿಗೆ ಇರಲಿದ್ದೇನೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿ ನಾಯಕರನ್ನು ಟಿಆರ್ಎಸ್ ಸರ್ಕಾರ ಅಕ್ರಮವಾಗಿ ಬಂಧಿಸಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p><a href="https://www.prajavani.net/india-news/osmania-varsity-says-no-to-rahul-gandhi-cong-sees-kcrs-hand-in-denial-933448.html" target="_blank">ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ: ಅನುಮತಿ ನಿರಾಕರಿಸಿದ ಒಸ್ಮಾನಿಯಾ ವಿ.ವಿ</a></p>.<p>ಓಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜತೆ ರಾಹುಲ್ ಗಾಂಧಿ ಸಂವಾದ ಏರ್ಪಡಿಸಲು ಇತ್ತೀಚೆಗೆ ಕಾಂಗ್ರೆಸ್ ಮುಂದಾಗಿತ್ತು. ಆದರೆ, ಕ್ಯಾಂಪಸ್ನಲ್ಲಿ ರಾಜಕೀಯ ಸಭೆಗಳನ್ನು ನಿಷೇಧಿಸುವ ನಿಯಮಗಳನ್ನು ಮತ್ತು ಕಾರ್ಯಕಾರಿ ಮಂಡಳಿಯ ನಿರ್ಣಯದ ಕಾರಣ ನೀಡಿ ವಿಶ್ವವಿದ್ಯಾಲಯ ಅನುಮತಿ ನಿರಾಕರಿಸಿತ್ತು.</p>.<p>ರಾಹುಲ್ ಜತೆ ಸಂವಾದಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಕುಲಪತಿ ಕಚೇರಿಯ ಎದುರು ಎನ್ಎಸ್ಯುಐ ಪ್ರತಿಭಟನೆ ಕಳೆದ ಭಾನುವಾರ ನಡೆಸಿತ್ತು. ಇದೇ ವೇಳೆ, ಎನ್ಎಸ್ಯುಐ ರಾಜ್ಯ ಘಟಕದ ಅಧ್ಯಕ್ಷ ಬಲ್ಮೂರ್ ವೆಂಕಟ್ ಸೇರಿದಂತೆ 18 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<p>ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಒತ್ತಡ ಹೇರಿರುವುದೇ ರಾಹುಲ್ ಸಂವಾದಕ್ಕೆ ಅನುಮತಿ ನಿರಾಕರಿಸಲು ಕಾರಣ ಎಂದು ಕಾಂಗ್ರೆಸ್ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇಲ್ಲಿನ ಚಂಚಲಗುಡ ಜೈಲಿಗೆ ತೆರಳಿ ಎನ್ಎಸ್ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ/ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ) ನಾಯಕರನ್ನು ಭೇಟಿ ಮಾಡಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷವು ಅನ್ಯಾಯದ ವಿರುದ್ಧ ನಿಸ್ವಾರ್ಥ ಹೋರಾಟ ನಡೆಸುತ್ತಿರುವ ಕಾರ್ಯಕರ್ತರಿಗೆ ಸಮರ್ಪಿತವಾಗಿದೆ. ನಾನು ಸದಾ ಅವರೊಂದಿಗೆ ಇರಲಿದ್ದೇನೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿ ನಾಯಕರನ್ನು ಟಿಆರ್ಎಸ್ ಸರ್ಕಾರ ಅಕ್ರಮವಾಗಿ ಬಂಧಿಸಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p><a href="https://www.prajavani.net/india-news/osmania-varsity-says-no-to-rahul-gandhi-cong-sees-kcrs-hand-in-denial-933448.html" target="_blank">ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ: ಅನುಮತಿ ನಿರಾಕರಿಸಿದ ಒಸ್ಮಾನಿಯಾ ವಿ.ವಿ</a></p>.<p>ಓಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜತೆ ರಾಹುಲ್ ಗಾಂಧಿ ಸಂವಾದ ಏರ್ಪಡಿಸಲು ಇತ್ತೀಚೆಗೆ ಕಾಂಗ್ರೆಸ್ ಮುಂದಾಗಿತ್ತು. ಆದರೆ, ಕ್ಯಾಂಪಸ್ನಲ್ಲಿ ರಾಜಕೀಯ ಸಭೆಗಳನ್ನು ನಿಷೇಧಿಸುವ ನಿಯಮಗಳನ್ನು ಮತ್ತು ಕಾರ್ಯಕಾರಿ ಮಂಡಳಿಯ ನಿರ್ಣಯದ ಕಾರಣ ನೀಡಿ ವಿಶ್ವವಿದ್ಯಾಲಯ ಅನುಮತಿ ನಿರಾಕರಿಸಿತ್ತು.</p>.<p>ರಾಹುಲ್ ಜತೆ ಸಂವಾದಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಕುಲಪತಿ ಕಚೇರಿಯ ಎದುರು ಎನ್ಎಸ್ಯುಐ ಪ್ರತಿಭಟನೆ ಕಳೆದ ಭಾನುವಾರ ನಡೆಸಿತ್ತು. ಇದೇ ವೇಳೆ, ಎನ್ಎಸ್ಯುಐ ರಾಜ್ಯ ಘಟಕದ ಅಧ್ಯಕ್ಷ ಬಲ್ಮೂರ್ ವೆಂಕಟ್ ಸೇರಿದಂತೆ 18 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<p>ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಒತ್ತಡ ಹೇರಿರುವುದೇ ರಾಹುಲ್ ಸಂವಾದಕ್ಕೆ ಅನುಮತಿ ನಿರಾಕರಿಸಲು ಕಾರಣ ಎಂದು ಕಾಂಗ್ರೆಸ್ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>