ಪದೇ ಪದೇ ಎಚ್ಚರಿಕೆ ನೀಡಿದ ಸ್ಪೀಕರ್
ಅಪ್ರಕಟಿತ ಪುಸ್ತಕವನ್ನು ಉಲ್ಲೇಖಿಸದಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಎಚ್ಚರಿಕೆ ನೀಡಿದರು. ‘ಈ ಕುರಿತು ಪ್ರಸ್ತಾಪಿಸಲು ರಾಹುಲ್ ಗಾಂಧಿ ಅವರಿಗೆ ಸ್ಪೀಕರ್ ಅನುಮತಿ ನಿರಾಕರಿಸಿದ್ದಾರೆ. ಅವರ ರೂಲಿಂಗ್ ಅನ್ನು ರಾಹುಲ್ ಪದೇ ಪದೇ ಉಲ್ಲಂಘಿಸಿದ್ದಾರೆ. ಈ ಮೂಲಕ ಅವರು ಪೀಠಕ್ಕೆ ಅಗೌರವ ತೋರಿದ್ದಾರೆ. ಸದನದ ನಿಯಮ ಪಾಲನೆ ವಿಷಯದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರು ಯುವ ಸಂಸದರಿಗೆ ಮಾದರಿಯಾಗಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದರು.