<p>PM lacks courage to confront Donald Trump over claims that US stopped India-Pak conflict: Rahul</p><p><strong>ನಳಂದ(ಬಿಹಾರ):</strong> ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರೂ ಅದನ್ನು ವಿರೋಧಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿಗೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಳಂದದಲ್ಲಿ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಹಾರವು ಈಗ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕಳಪೆ ಆರೋಗ್ಯ ಮೂಲಸೌಕರ್ಯಗಳಿಂದ ಸುದ್ದಿ ಮಾಡುತ್ತಿದೆ ಎಂದಿದ್ದಾರೆ.</p><p>‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಾನು ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷರು ಹಲವು ಬಾರಿ ಹೇಳಿಕೊಂಡಿದ್ದಾರೆ.. ಆದರೆ, ನಮ್ಮ ಪ್ರಧಾನಿಗೆ ಅವರನ್ನು ಎದುರಿಸುವ ಧೈರ್ಯವಿಲ್ಲ’ಎಂದು ರಾಹುಲ್ ಆರೋಪಿಸಿದ್ದಾರೆ.</p><p>ಬಿಹಾರದಲ್ಲಿ ಭೂಮಿ ಲಭ್ಯವಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಟೀಕಿಸಿದ ರಾಹುಲ್, ರಾಜ್ಯ ಸರ್ಕಾರವು ಕೈಗಾರಿಕೆಗಳಿಗೆ ಕಡಿಮೆ ಬೆಲೆಗೆ ನಿವೇಶನಗಳನ್ನು ನೀಡಿದೆ ಎಂದು ಆರೋಪಿಸಿದ್ದಾರೆ.</p><p>‘ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ವೋಟ್ ಚೋರಿ ಮೂಲಕ ಸರ್ಕಾರವನ್ನು ರಚಿಸಿತ್ತು. ಎನ್ಡಿಎ ಮತ್ತು ಪ್ರಧಾನಿ ಮೋದಿ, ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾಶಮಾಡಲು ಮುಂದಾಗಿದ್ದಾರೆ’ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.</p><p>ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ, ಅದು ರೈತರು, ಕಾರ್ಮಿಕರು, ದಲಿತರು ಮತ್ತು ದುರ್ಬಲ ವರ್ಗಗಳ ಸರ್ಕಾರವಾಗಿರುತ್ತದೆ. ಎಲ್ಲಾ ಸಮುದಾಯಗಳ ಪ್ರಾತಿನಿಧ್ಯವನ್ನು ಹೊಂದಿರುತ್ತದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.</p><p>‘ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯ ನಳಂದದಲ್ಲಿ ತಲೆ ಎತ್ತಲಿದೆ’ಎಂದೂ ಅವರು ಭರವಸೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>PM lacks courage to confront Donald Trump over claims that US stopped India-Pak conflict: Rahul</p><p><strong>ನಳಂದ(ಬಿಹಾರ):</strong> ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರೂ ಅದನ್ನು ವಿರೋಧಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿಗೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಳಂದದಲ್ಲಿ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಹಾರವು ಈಗ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕಳಪೆ ಆರೋಗ್ಯ ಮೂಲಸೌಕರ್ಯಗಳಿಂದ ಸುದ್ದಿ ಮಾಡುತ್ತಿದೆ ಎಂದಿದ್ದಾರೆ.</p><p>‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಾನು ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷರು ಹಲವು ಬಾರಿ ಹೇಳಿಕೊಂಡಿದ್ದಾರೆ.. ಆದರೆ, ನಮ್ಮ ಪ್ರಧಾನಿಗೆ ಅವರನ್ನು ಎದುರಿಸುವ ಧೈರ್ಯವಿಲ್ಲ’ಎಂದು ರಾಹುಲ್ ಆರೋಪಿಸಿದ್ದಾರೆ.</p><p>ಬಿಹಾರದಲ್ಲಿ ಭೂಮಿ ಲಭ್ಯವಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಟೀಕಿಸಿದ ರಾಹುಲ್, ರಾಜ್ಯ ಸರ್ಕಾರವು ಕೈಗಾರಿಕೆಗಳಿಗೆ ಕಡಿಮೆ ಬೆಲೆಗೆ ನಿವೇಶನಗಳನ್ನು ನೀಡಿದೆ ಎಂದು ಆರೋಪಿಸಿದ್ದಾರೆ.</p><p>‘ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ವೋಟ್ ಚೋರಿ ಮೂಲಕ ಸರ್ಕಾರವನ್ನು ರಚಿಸಿತ್ತು. ಎನ್ಡಿಎ ಮತ್ತು ಪ್ರಧಾನಿ ಮೋದಿ, ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾಶಮಾಡಲು ಮುಂದಾಗಿದ್ದಾರೆ’ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.</p><p>ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ, ಅದು ರೈತರು, ಕಾರ್ಮಿಕರು, ದಲಿತರು ಮತ್ತು ದುರ್ಬಲ ವರ್ಗಗಳ ಸರ್ಕಾರವಾಗಿರುತ್ತದೆ. ಎಲ್ಲಾ ಸಮುದಾಯಗಳ ಪ್ರಾತಿನಿಧ್ಯವನ್ನು ಹೊಂದಿರುತ್ತದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.</p><p>‘ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯ ನಳಂದದಲ್ಲಿ ತಲೆ ಎತ್ತಲಿದೆ’ಎಂದೂ ಅವರು ಭರವಸೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>