ಸ್ಯಾಂ ಪಿತ್ರೋಡಾ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅಮಿತ್ ಶಾ, ಕೂಡಲೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು. ಅಲ್ಲದೆ, ಪುಲ್ವಾಮಾ ಘಟನೆ ಮಹಾ ದುರಂತ. ಯಾವ ಕಾಲಕ್ಕೂ ಈ ಘಟನೆಯನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಪಿತ್ರೋಡಾ ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು. ರಾಹುಲ್ ಗಾಂಧಿ ಕೂಡ ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ಹೇಳಬೇಕು. ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರಾಗಲಿ ಭಾರತೀಯ ವಾಯುಸೇನೆಯನ್ನು ಸಂಶಯದಿಂದ ನೋಡಬಾರದು ಎಂದು ಶಾ ತಿರುಗೇಟು ನೀಡಿದ್ದಾರೆ.