ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಪ್ರತಿಭಟನೆ ನಡೆಸುವ ವೇಳೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಜಗದೀಪ್ ಅವರನ್ನು ಅಣಕಿಸಿದ್ದರು. ಅದನ್ನು ಕಾಂಗ್ರೆಸ್ ಮುಖಂಡ ರಾಯಲ್ ಗಾಂಧಿ ಚಿತ್ರೀಕರಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯವರ್ಗಿಯ, ‘ರಾಜ್ಯಸಭಾಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಧನಕರ್ ಅವರನ್ನು ಬ್ಯಾನರ್ಜಿ ಅವರು ಸಂಸತ್ತಿನ ಆವರಣದಲ್ಲಿ ಅಣಕಿಸುತ್ತಿದ್ದರೆ, ಅದನ್ನು ನಿಲ್ಲಿಸುವ ಬದಲು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸುತ್ತಿದ್ದರು. ಇದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.