<p><strong>ದೇವೊಗಢ(ಜಾರ್ಖಂಡ್):</strong> ಭಾರತ್ ಜೋಡೊ ನ್ಯಾಯ ಯಾತ್ರೆ ಭಾಗವಾಗಿ ಜಾರ್ಖಂಡ್ ತಲುಪಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶನಿವಾರ ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ‘ಬೈದ್ಯನಾಥ ಧಾಮ ದೇವಾಲಯಲ್ಲಿ ರುದ್ರಾಭಿಷೇಕ ಪೂಜೆ ನೆರೆವೇರಿಸಿದ ರಾಹುಲ್ ಗಾಂಧಿ, ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಪ್ರಾರ್ಥಿಸಿದ್ದಾರೆ’ ಎಂದಿದೆ.</p><p>ಶುಕ್ರವಾರ(ಫೆ.2) ಜಾರ್ಖಂಡ್ ತಲುಪಿದ ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಬರಮಾಡಿಕೊಂಡರು. ಯಾತ್ರೆ ವೇಳೆ ನಿರುದ್ಯೋಗ, ಬುಡಕಟ್ಟು ಜನರ ಭೂಮಿ ಕಬಳಿಕೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.</p><p>ಮಣಿಪುರದಿಂದ ಪ್ರಾರಂಭವಾದ ಯಾತ್ರೆಯು ಮಹಾರಾಷ್ಟ್ರದಲ್ಲಿ ಮುಕ್ತಾಯಗೊಳ್ಳುವ ಮೊದಲು ಒಡಿಶಾ, ಛತ್ತೀಸ್ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್ ಮೂಲಕ ಸಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವೊಗಢ(ಜಾರ್ಖಂಡ್):</strong> ಭಾರತ್ ಜೋಡೊ ನ್ಯಾಯ ಯಾತ್ರೆ ಭಾಗವಾಗಿ ಜಾರ್ಖಂಡ್ ತಲುಪಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶನಿವಾರ ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ‘ಬೈದ್ಯನಾಥ ಧಾಮ ದೇವಾಲಯಲ್ಲಿ ರುದ್ರಾಭಿಷೇಕ ಪೂಜೆ ನೆರೆವೇರಿಸಿದ ರಾಹುಲ್ ಗಾಂಧಿ, ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಪ್ರಾರ್ಥಿಸಿದ್ದಾರೆ’ ಎಂದಿದೆ.</p><p>ಶುಕ್ರವಾರ(ಫೆ.2) ಜಾರ್ಖಂಡ್ ತಲುಪಿದ ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಬರಮಾಡಿಕೊಂಡರು. ಯಾತ್ರೆ ವೇಳೆ ನಿರುದ್ಯೋಗ, ಬುಡಕಟ್ಟು ಜನರ ಭೂಮಿ ಕಬಳಿಕೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.</p><p>ಮಣಿಪುರದಿಂದ ಪ್ರಾರಂಭವಾದ ಯಾತ್ರೆಯು ಮಹಾರಾಷ್ಟ್ರದಲ್ಲಿ ಮುಕ್ತಾಯಗೊಳ್ಳುವ ಮೊದಲು ಒಡಿಶಾ, ಛತ್ತೀಸ್ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್ ಮೂಲಕ ಸಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>