ರಾಹುಲ್ ಅವರು ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ ಸಚ್ಖಂಡ್ ಶ್ರೀ ಹರ್ಮಂದಿರ್ ಸಾಹಿಬ್ಗೆ ನಮನ ಸಲ್ಲಿಸಲಿದ್ದಾರೆ. ಅವರ ಖಾಸಗಿತನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಪಕ್ಷದ ಜವಾಬ್ದಾರಿ. ಹಾಗಾಗಿ, ಕಾರ್ಯಕರ್ತರು ಅವರನ್ನು ಭೇಟಿ ಮಾಡಲು ಬರಬಾರದು ಎಂದು ಪಂಜಾಬ್ನ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮನವಿ ಮಾಡಿದ್ದರು.