<p><strong>ನವದೆಹಲಿ:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಸ್ಥರನ್ನು ಭೇಟಿ ಮಾಡಲುಮೀರತ್ಗೆ ತೆರಳಲು ಮುಂದಾಗಿದ್ದಾಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶದ ಪೊಲೀಸರು ತಡೆದಿದ್ದಾರೆ.</p>.<p>ಕಳೆದ ವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಪ್ರತಿಭಟನೆಯಲ್ಲಿ ಸುಮಾರು ಆರು ಜನರು ಪ್ರಾಣ ಕಳೆದುಕೊಂಡಿದ್ದರು.</p>.<p>ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಇಂದು ಮುಂಜಾನೆ ಎಸ್ಯುವಿಯಲ್ಲಿ ಮೀರತ್ಗೆ ಭೇಟಿ ನೀಡಲು ತೆರಳುತ್ತಿದ್ದರು. ಈ ವೇಳೆ ಪೊಲೀಸರು ದೆಹಲಿಯಿಂದ 60 ಕಿ.ಮೀ. ದೂರದ ಮೀರತ್ಗೆ ತೆರಳದಂತೆ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಜನ ಸೇರುವುದನ್ನು ನಿಷೇಧಿಸಿರುವ ಕಾರಣದಿಂದಾಗಿ ಪೊಲೀಸರು ಪ್ರವೇಶ ನಿರಾಕರಿಸಿದ್ದು, ಅಲ್ಲಿಂದ ಕಾಂಗ್ರೆಸ್ ನಾಯಕರು ದೆಹಲಿಗೆ ಹಿಂತಿರುಗಿದ್ದಾರೆ.</p>.<p>ಈ ಕುರಿತು ಯಾವುದೇ ಆದೇಶದ ಪ್ರತಿಯನ್ನು ತೋರಿಸುವಂತೆ ಪೊಲೀಸರನ್ನು ನಾವು ಕೇಳಿದೆವು. ಆದರೆ ಅವರು ಯಾವುದನ್ನು ತೋರಿಸಲಿಲ್ಲ. ಆದರೆ ದಯಮಾಡಿ ಹಿಂತಿರುಗಿ ಎಂದಷ್ಟೇ ಹೇಳಿದರು. ಹಾಗಾಗಿ ನಮ್ಮ ಭೇಟಿಯನ್ನು ಮುಂದೂಡಿದ್ದೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.</p>.<p>ಪೊಲೀಸರು ಕೇವಲ ಮೂರು ಜನರು ಮಾತ್ರ ಅಲ್ಲಿಗೆ ತೆರಳುವಂತೆ ಸೂಚಿಸಿದರು. ಆದರೆ ಅಲ್ಲಿಂದ ಮುಂದೆ ತೆರಳಲು ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.</p>.<p>ಶನಿವಾರವಷ್ಟೇ ಪ್ರಿಯಾಂಕಾ ಗಾಂಧಿ ಅವರು, ಪ್ರತಿಭಟನೆಯಲ್ಲಿ ಮೃತಪಟ್ಟಿದ್ದ ಇಬ್ಬರು ಸಂತ್ರಸ್ತರ ಬಿಜ್ನೋರ್ನಲ್ಲಿನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಸ್ಥರನ್ನು ಭೇಟಿ ಮಾಡಲುಮೀರತ್ಗೆ ತೆರಳಲು ಮುಂದಾಗಿದ್ದಾಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶದ ಪೊಲೀಸರು ತಡೆದಿದ್ದಾರೆ.</p>.<p>ಕಳೆದ ವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಪ್ರತಿಭಟನೆಯಲ್ಲಿ ಸುಮಾರು ಆರು ಜನರು ಪ್ರಾಣ ಕಳೆದುಕೊಂಡಿದ್ದರು.</p>.<p>ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಇಂದು ಮುಂಜಾನೆ ಎಸ್ಯುವಿಯಲ್ಲಿ ಮೀರತ್ಗೆ ಭೇಟಿ ನೀಡಲು ತೆರಳುತ್ತಿದ್ದರು. ಈ ವೇಳೆ ಪೊಲೀಸರು ದೆಹಲಿಯಿಂದ 60 ಕಿ.ಮೀ. ದೂರದ ಮೀರತ್ಗೆ ತೆರಳದಂತೆ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಜನ ಸೇರುವುದನ್ನು ನಿಷೇಧಿಸಿರುವ ಕಾರಣದಿಂದಾಗಿ ಪೊಲೀಸರು ಪ್ರವೇಶ ನಿರಾಕರಿಸಿದ್ದು, ಅಲ್ಲಿಂದ ಕಾಂಗ್ರೆಸ್ ನಾಯಕರು ದೆಹಲಿಗೆ ಹಿಂತಿರುಗಿದ್ದಾರೆ.</p>.<p>ಈ ಕುರಿತು ಯಾವುದೇ ಆದೇಶದ ಪ್ರತಿಯನ್ನು ತೋರಿಸುವಂತೆ ಪೊಲೀಸರನ್ನು ನಾವು ಕೇಳಿದೆವು. ಆದರೆ ಅವರು ಯಾವುದನ್ನು ತೋರಿಸಲಿಲ್ಲ. ಆದರೆ ದಯಮಾಡಿ ಹಿಂತಿರುಗಿ ಎಂದಷ್ಟೇ ಹೇಳಿದರು. ಹಾಗಾಗಿ ನಮ್ಮ ಭೇಟಿಯನ್ನು ಮುಂದೂಡಿದ್ದೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.</p>.<p>ಪೊಲೀಸರು ಕೇವಲ ಮೂರು ಜನರು ಮಾತ್ರ ಅಲ್ಲಿಗೆ ತೆರಳುವಂತೆ ಸೂಚಿಸಿದರು. ಆದರೆ ಅಲ್ಲಿಂದ ಮುಂದೆ ತೆರಳಲು ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.</p>.<p>ಶನಿವಾರವಷ್ಟೇ ಪ್ರಿಯಾಂಕಾ ಗಾಂಧಿ ಅವರು, ಪ್ರತಿಭಟನೆಯಲ್ಲಿ ಮೃತಪಟ್ಟಿದ್ದ ಇಬ್ಬರು ಸಂತ್ರಸ್ತರ ಬಿಜ್ನೋರ್ನಲ್ಲಿನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>