<p><strong>ರಾಯ್ಬರೇಲಿ (ಉತ್ತರ ಪ್ರದೇಶ)</strong>: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಗುರುವಾರ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಿದರು. ಊಂಚಾಹಾರ್ ಶಾಸಕ ಮನೋಜ್ ಕುಮಾರ್ ಪಾಂಡೆ ಅವರು ಸಭೆ ಬಹಿಷ್ಕರಿಸಿದರು.</p>.<p>ಪ್ರತಿ ಮೂರು ತಿಂಗಳಿಗೊಮ್ಮೆ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ದಿಶಾ ಸಭೆ ನಡೆಸಲಾಗುತ್ತದೆ. ತಮ್ಮ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಂಬಂಧ ರಾಹುಲ್ ಅವರು ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. </p>.<p>ಜಿಲ್ಲಾಧಿಕಾರಿ ಕಚೇರಿಯ ಬಚತ್ ಭವನ್ ಆಡಿಟೋರಿಯಂನಲ್ಲಿ ನಡೆದ ಸಭೆಯಲ್ಲಿ ರಾಹುಲ್ ಜತೆಗೆ ಉತ್ತರ ಪ್ರದೇಶದ ತೋಟಗಾರಿಕಾ ಸಚಿವ ದಿನೇಶ್ ಪ್ರತಾಪ್ ಸಿಂಗ್, ಅಮೇಠಿ ಕ್ಷೇತ್ರದ ಸಂಸದ ಕೆ.ಎಲ್.ಶರ್ಮಾ ಭಾಗಿಯಾಗಿದ್ದರು. ಸಭೆಗೂ ಮುನ್ನವೇ ಮನೋಜ್ ಪಾಂಡೆ ಹೊರನಡೆದರು.</p>.<p>ಪಾಂಡೆ ಸಮಾಜವಾದಿ ಪಕ್ಷದ ಮಾಜಿ ನಾಯಕ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.</p>.<p class="bodytext">‘ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿದೆ. ಈ ಕುರಿತು ರಾಹುಲ್ ಗಾಂಧಿ ಅವರಿಗೆ ಲಿಖಿತ ಮನವಿ ನೀಡಿ, ಪ್ರಧಾನಿ ತಾಯಿಗೆ ಆದ ಅವಮಾನವನ್ನು ಖಂಡಿಸಬೇಕು ಎಂದು ಮನವಿ ಮಾಡಿದೆ’ ಎಂದು ಪತ್ರಕರ್ತರಿಗೆ ತಿಳಿಸಿದರು.</p>.<p class="bodytext">‘ಕ್ಷೇತ್ರದ ವ್ಯಾಪ್ತಿಯಲ್ಲಿ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಬೆಡ್ಗಳ ಕೊರತೆ ಇದೆ. ಈ ಬಗ್ಗೆ ಅವರು ಸಂಸದರಾದ ಮೇಲೆ ಎಷ್ಟು ಸಲ ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದಾರೆ’ ಎಂದು ಈ ವೇಳೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ (ಉತ್ತರ ಪ್ರದೇಶ)</strong>: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಗುರುವಾರ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಿದರು. ಊಂಚಾಹಾರ್ ಶಾಸಕ ಮನೋಜ್ ಕುಮಾರ್ ಪಾಂಡೆ ಅವರು ಸಭೆ ಬಹಿಷ್ಕರಿಸಿದರು.</p>.<p>ಪ್ರತಿ ಮೂರು ತಿಂಗಳಿಗೊಮ್ಮೆ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ದಿಶಾ ಸಭೆ ನಡೆಸಲಾಗುತ್ತದೆ. ತಮ್ಮ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಂಬಂಧ ರಾಹುಲ್ ಅವರು ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. </p>.<p>ಜಿಲ್ಲಾಧಿಕಾರಿ ಕಚೇರಿಯ ಬಚತ್ ಭವನ್ ಆಡಿಟೋರಿಯಂನಲ್ಲಿ ನಡೆದ ಸಭೆಯಲ್ಲಿ ರಾಹುಲ್ ಜತೆಗೆ ಉತ್ತರ ಪ್ರದೇಶದ ತೋಟಗಾರಿಕಾ ಸಚಿವ ದಿನೇಶ್ ಪ್ರತಾಪ್ ಸಿಂಗ್, ಅಮೇಠಿ ಕ್ಷೇತ್ರದ ಸಂಸದ ಕೆ.ಎಲ್.ಶರ್ಮಾ ಭಾಗಿಯಾಗಿದ್ದರು. ಸಭೆಗೂ ಮುನ್ನವೇ ಮನೋಜ್ ಪಾಂಡೆ ಹೊರನಡೆದರು.</p>.<p>ಪಾಂಡೆ ಸಮಾಜವಾದಿ ಪಕ್ಷದ ಮಾಜಿ ನಾಯಕ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.</p>.<p class="bodytext">‘ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿದೆ. ಈ ಕುರಿತು ರಾಹುಲ್ ಗಾಂಧಿ ಅವರಿಗೆ ಲಿಖಿತ ಮನವಿ ನೀಡಿ, ಪ್ರಧಾನಿ ತಾಯಿಗೆ ಆದ ಅವಮಾನವನ್ನು ಖಂಡಿಸಬೇಕು ಎಂದು ಮನವಿ ಮಾಡಿದೆ’ ಎಂದು ಪತ್ರಕರ್ತರಿಗೆ ತಿಳಿಸಿದರು.</p>.<p class="bodytext">‘ಕ್ಷೇತ್ರದ ವ್ಯಾಪ್ತಿಯಲ್ಲಿ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಬೆಡ್ಗಳ ಕೊರತೆ ಇದೆ. ಈ ಬಗ್ಗೆ ಅವರು ಸಂಸದರಾದ ಮೇಲೆ ಎಷ್ಟು ಸಲ ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದಾರೆ’ ಎಂದು ಈ ವೇಳೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>