<p><strong>ನವದೆಹಲಿ</strong>: ಮೈಸೂರಿನಲ್ಲಿ ಮಳೆಯ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಷಣ ಮಾಡಿರುವ ವಿಡಿಯೊ ಹಾಗೂ ಫೋಟೊಗಳು ವೈರಲ್ ಆಗಿವೆ.</p>.<p>ಮಳೆಯಲ್ಲಿ ಭಾಷಣ ಮಾಡುತ್ತಿರುವ ರಾಹುಲ್ ಹಾಗೂ ಶರದ್ ಪವಾರ್ ಫೋಟೊಗಳನ್ನು ಹಂಚಿಕೊಂಡಿರುವ ಎನ್ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ‘ಈ ಹಿಂದೆ ಸಮಯವು ಸಾಬೀತುಪಡಿಸಿದೆ. ಮುಂದೆಯೂ ಸಾಬೀತುಪಡಿಸಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. </p>.<p>‘ವರುಣದೇವ ನಿಮ್ಮನ್ನು ಆಶೀರ್ವದಿಸಲು ನಿರ್ಧರಿಸಿದಾಗ, ಶೀಘ್ರದಲ್ಲೇ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಬಿರುಗಾಳಿ ಬೀಸಲಿದೆ’ ಎಂದು ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಪಾದಯಾತ್ರೆಯು ಭಾನುವಾರ ಜೋರು ಮಳೆಯಲ್ಲಿ ನಡೆಯಿತು.</p>.<p>ನಂಜನಗೂಡು ತಾಲ್ಲೂಕು ಕಡಕೊಳದ ಕಾಳಿಬೀರಮ್ಮ ದೇವಸ್ಥಾನದ ಬಳಿಯಿಂದ 4.46ಕ್ಕೆ ಹೊರಟ ಪಾದಯಾತ್ರೆಯಲ್ಲಿ 25ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ರಾಹುಲ್ ಜೊತೆ ನಾಯಕರೂ ಹೆಜ್ಜೆ ಹಾಕಿದರು. ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆ ಆರಂಭವಾಯಿತು.</p>.<p>ಎಪಿಎಂಸಿ ಸಮೀಪ ಮಳೆಯಲ್ಲೇ ಭಾಷಣ ಮಾಡಿದ ರಾಹುಲ್, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ’ ಎಂದು ಪ್ರಶ್ನಿಸಿದರು.</p>.<p>‘ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಯಾತ್ರೆ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನದಿಗಳು ಹರಿಯುವಂತೆಯೇ ಮುಂದುವರಿಯುತ್ತದೆ. ಇಲ್ಲಿ, ಯಾವುದೇ ದ್ವೇಷ–ಅಸೂಯೆ ಕಾಣುವುದಿಲ್ಲ. ಕೇವಲ ಪ್ರೀತಿ–ಸಹನೆಯ ಸಂದೇಶವನ್ನಷ್ಟೆ ನೀಡಲಾಗುತ್ತಿದೆ. ಇದೇ ನಮ್ಮ ದೇಶದ ಸಂಸ್ಕೃತಿಯಾಗಿದೆ’ ಎಂದರು.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/district/mysuru/mysuru-bharath-jodo-yatra-story-977225.html" target="_blank"><strong>ಜೋಡೊ ಯಾತ್ರೆ: ‘ಜೋಡಿ’ಸಿದ ರಸ್ತೆ, ವೈಷಮ್ಯ ನಿವಾರಣೆ ಯತ್ನ– ವಿಶೇಷ ವರದಿ</strong></a></p>.<p><a href="https://www.prajavani.net/karnataka-news/bharat-jodo-yatra-bjp-siddaramaiah-congress-karnataka-politics-976790.html" target="_blank"><strong>ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ</strong></a></p>.<p><a href="https://www.prajavani.net/karnataka-news/dk-shivakumar-congress-paycm-bjp-karnataka-politics-basavaraj-bommai-976804.html" target="_blank"><strong>ನಾವೂ ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ, ಏನ್ಮಾಡ್ಕೊತಿರಾ?: ಡಿಕೆಶಿ</strong></a></p>.<p><a href="https://www.prajavani.net/karnataka-news/bharat-jodo-yatra-siddaramaiah-congress-rahul-gandhi-paycm-basavaraj-bommai-karnataka-976816.html" target="_blank"><strong>ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ: ಸಿದ್ದರಾಮಯ್ಯ ಆಕ್ರೋಶ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮೈಸೂರಿನಲ್ಲಿ ಮಳೆಯ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಷಣ ಮಾಡಿರುವ ವಿಡಿಯೊ ಹಾಗೂ ಫೋಟೊಗಳು ವೈರಲ್ ಆಗಿವೆ.</p>.<p>ಮಳೆಯಲ್ಲಿ ಭಾಷಣ ಮಾಡುತ್ತಿರುವ ರಾಹುಲ್ ಹಾಗೂ ಶರದ್ ಪವಾರ್ ಫೋಟೊಗಳನ್ನು ಹಂಚಿಕೊಂಡಿರುವ ಎನ್ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ‘ಈ ಹಿಂದೆ ಸಮಯವು ಸಾಬೀತುಪಡಿಸಿದೆ. ಮುಂದೆಯೂ ಸಾಬೀತುಪಡಿಸಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. </p>.<p>‘ವರುಣದೇವ ನಿಮ್ಮನ್ನು ಆಶೀರ್ವದಿಸಲು ನಿರ್ಧರಿಸಿದಾಗ, ಶೀಘ್ರದಲ್ಲೇ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಬಿರುಗಾಳಿ ಬೀಸಲಿದೆ’ ಎಂದು ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಪಾದಯಾತ್ರೆಯು ಭಾನುವಾರ ಜೋರು ಮಳೆಯಲ್ಲಿ ನಡೆಯಿತು.</p>.<p>ನಂಜನಗೂಡು ತಾಲ್ಲೂಕು ಕಡಕೊಳದ ಕಾಳಿಬೀರಮ್ಮ ದೇವಸ್ಥಾನದ ಬಳಿಯಿಂದ 4.46ಕ್ಕೆ ಹೊರಟ ಪಾದಯಾತ್ರೆಯಲ್ಲಿ 25ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ರಾಹುಲ್ ಜೊತೆ ನಾಯಕರೂ ಹೆಜ್ಜೆ ಹಾಕಿದರು. ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆ ಆರಂಭವಾಯಿತು.</p>.<p>ಎಪಿಎಂಸಿ ಸಮೀಪ ಮಳೆಯಲ್ಲೇ ಭಾಷಣ ಮಾಡಿದ ರಾಹುಲ್, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ’ ಎಂದು ಪ್ರಶ್ನಿಸಿದರು.</p>.<p>‘ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಯಾತ್ರೆ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನದಿಗಳು ಹರಿಯುವಂತೆಯೇ ಮುಂದುವರಿಯುತ್ತದೆ. ಇಲ್ಲಿ, ಯಾವುದೇ ದ್ವೇಷ–ಅಸೂಯೆ ಕಾಣುವುದಿಲ್ಲ. ಕೇವಲ ಪ್ರೀತಿ–ಸಹನೆಯ ಸಂದೇಶವನ್ನಷ್ಟೆ ನೀಡಲಾಗುತ್ತಿದೆ. ಇದೇ ನಮ್ಮ ದೇಶದ ಸಂಸ್ಕೃತಿಯಾಗಿದೆ’ ಎಂದರು.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/district/mysuru/mysuru-bharath-jodo-yatra-story-977225.html" target="_blank"><strong>ಜೋಡೊ ಯಾತ್ರೆ: ‘ಜೋಡಿ’ಸಿದ ರಸ್ತೆ, ವೈಷಮ್ಯ ನಿವಾರಣೆ ಯತ್ನ– ವಿಶೇಷ ವರದಿ</strong></a></p>.<p><a href="https://www.prajavani.net/karnataka-news/bharat-jodo-yatra-bjp-siddaramaiah-congress-karnataka-politics-976790.html" target="_blank"><strong>ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ</strong></a></p>.<p><a href="https://www.prajavani.net/karnataka-news/dk-shivakumar-congress-paycm-bjp-karnataka-politics-basavaraj-bommai-976804.html" target="_blank"><strong>ನಾವೂ ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ, ಏನ್ಮಾಡ್ಕೊತಿರಾ?: ಡಿಕೆಶಿ</strong></a></p>.<p><a href="https://www.prajavani.net/karnataka-news/bharat-jodo-yatra-siddaramaiah-congress-rahul-gandhi-paycm-basavaraj-bommai-karnataka-976816.html" target="_blank"><strong>ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ: ಸಿದ್ದರಾಮಯ್ಯ ಆಕ್ರೋಶ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>