<p><strong>ನವದೆಹಲಿ:</strong> ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಬಿಟ್ಟು ನಡುವೆ ಬುಧವಾರ ಸಂಸತ್ ಭವನದಲ್ಲಿ ಸಣ್ಣ ಪ್ರಮಾಣದ ಮಾತಿನ ಚಕಮಕಿ ನಡೆಯಿತು.</p><p>ಕಲಾಪದಿಂದ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಬಳಿಗೆ ಬಂದ ಬಿಜೆಪಿ ನಾಯಕ ರವನೀತ್ ಬಿಟ್ಟು ಅವರನ್ನು ರಾಹುಲ್ ಗಾಂಧಿ ‘ದೇಶದ್ರೋಹಿ ಸ್ನೇಹಿತ’ ಎಂದು ಕರೆದಿದ್ದಾರೆ.</p><p>ಇದಕ್ಕೂ ಮೊದಲು ಬಿಟ್ಟು ಅವರು ಕಾಂಗ್ರೆಸ್ನಿಂದ ಮೂರು ಭಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮಾತ್ರವಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರು ಕೂಡ ಆಗಿದ್ದರು. ಅವರು 2024ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು.</p><p>ಸಂಸತ್ ಭವನದ ಮಕರ ದ್ವಾರದ ಬಳಿ ಪ್ರತಿಭಟನೆ ಕುಳಿತಿದ್ದ ಕಾಂಗ್ರೆಸ್ ಸಂಸದರನ್ನು ‘ಯುದ್ಧ ಗೆದ್ದವರಂತೆ ಕುಳಿತಿದ್ದಾರೆ’ ಎಂದು ಬಿಟ್ಟು ಅವರು ಛೇಡಿಸಿದರು.</p><p>ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ‘ನೋಡಿ ದೇಶದ್ರೋಹಿ ನಡೆದುಕೊಂಡು ಬರುತ್ತಿದ್ದಾನೆ, ಅವನ ನಡಿಗೆಯ ವೇಗ ನೋಡಿ’ ಎಂದು ಹೇಳಿದರು. ಅಷ್ಟಕ್ಕೆ ಸುಮ್ಮನಾಗದೆ, ‘ನನ್ನ ದೇಶದ್ರೋಹಿ ಸ್ನೇಹಿತ’ ಎಂದು ಹಸ್ತಲಾಘವ ನೀಡಲು ಮುಂದಾದರು.</p>.<p>ಈ ಸಂದರ್ಭದಲ್ಲಿ ಬಿಟ್ಟು ಅವರು ಕಾಂಗ್ರೆಸ್ ದೇಶವನ್ನೇ ಮಾರಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದರು ಬಿಜೆಪಿ ದೇಶವನ್ನು ಮಾರಿದೆ ಎಂದು ಘೋಷಣೆ ಕೂಗಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಬಿಟ್ಟು ಅಲ್ಲಿಂದ ಹೊರಟುಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಬಿಟ್ಟು ನಡುವೆ ಬುಧವಾರ ಸಂಸತ್ ಭವನದಲ್ಲಿ ಸಣ್ಣ ಪ್ರಮಾಣದ ಮಾತಿನ ಚಕಮಕಿ ನಡೆಯಿತು.</p><p>ಕಲಾಪದಿಂದ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಬಳಿಗೆ ಬಂದ ಬಿಜೆಪಿ ನಾಯಕ ರವನೀತ್ ಬಿಟ್ಟು ಅವರನ್ನು ರಾಹುಲ್ ಗಾಂಧಿ ‘ದೇಶದ್ರೋಹಿ ಸ್ನೇಹಿತ’ ಎಂದು ಕರೆದಿದ್ದಾರೆ.</p><p>ಇದಕ್ಕೂ ಮೊದಲು ಬಿಟ್ಟು ಅವರು ಕಾಂಗ್ರೆಸ್ನಿಂದ ಮೂರು ಭಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮಾತ್ರವಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರು ಕೂಡ ಆಗಿದ್ದರು. ಅವರು 2024ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು.</p><p>ಸಂಸತ್ ಭವನದ ಮಕರ ದ್ವಾರದ ಬಳಿ ಪ್ರತಿಭಟನೆ ಕುಳಿತಿದ್ದ ಕಾಂಗ್ರೆಸ್ ಸಂಸದರನ್ನು ‘ಯುದ್ಧ ಗೆದ್ದವರಂತೆ ಕುಳಿತಿದ್ದಾರೆ’ ಎಂದು ಬಿಟ್ಟು ಅವರು ಛೇಡಿಸಿದರು.</p><p>ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ‘ನೋಡಿ ದೇಶದ್ರೋಹಿ ನಡೆದುಕೊಂಡು ಬರುತ್ತಿದ್ದಾನೆ, ಅವನ ನಡಿಗೆಯ ವೇಗ ನೋಡಿ’ ಎಂದು ಹೇಳಿದರು. ಅಷ್ಟಕ್ಕೆ ಸುಮ್ಮನಾಗದೆ, ‘ನನ್ನ ದೇಶದ್ರೋಹಿ ಸ್ನೇಹಿತ’ ಎಂದು ಹಸ್ತಲಾಘವ ನೀಡಲು ಮುಂದಾದರು.</p>.<p>ಈ ಸಂದರ್ಭದಲ್ಲಿ ಬಿಟ್ಟು ಅವರು ಕಾಂಗ್ರೆಸ್ ದೇಶವನ್ನೇ ಮಾರಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದರು ಬಿಜೆಪಿ ದೇಶವನ್ನು ಮಾರಿದೆ ಎಂದು ಘೋಷಣೆ ಕೂಗಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಬಿಟ್ಟು ಅಲ್ಲಿಂದ ಹೊರಟುಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>