<p><strong>ನವದೆಹಲಿ:</strong> ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ದೇಶದಲ್ಲಿ ಜಾರಿಗೊಳಿಸಿದ ಹಠಾತ್ ಲಾಕ್ಡೌನ್ ಅಸಂಘಟಿತ ವಲಯದವರಿಗೆ ಮರಣದಂಡನೆಯಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘21 ದಿನಗಳಲ್ಲಿ ಕೊರೊನಾವನ್ನು ಕೊನೆಗಾಣಿಸುವುದಾಗಿ ಭರವಸೆ ನೀಡಲಾಯಿತು. ಆದರೆ, ಈ ನಿರ್ಧಾರವು ಕೋಟ್ಯಂತರ ಉದ್ಯೋಗ, ಸಣ್ಣ ಉದ್ಯಮಗಳನ್ನು ಕೊನೆಗಾಣಿಸಿತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ ಲಾಕ್ಡೌನ್ ಜನವಿರೋಧಿ ಎಂದೂ ಅವರು ಟೀಕಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/rahul-gandhi-says-govt-selling-countrys-assets-shameful-760110.html" itemprop="url">ದೇಶದ ಸ್ವತ್ತುಗಳನ್ನು ಸರ್ಕಾರ ಮಾರಾಟ ಮಾಡುತ್ತಿರೋದು ನಾಚಿಕೆಗೇಡು: ರಾಹುಲ್ ಗಾಂಧಿ</a></p>.<p>ಕೇಂದ್ರದ ಎನ್ಡಿಎ ಸರ್ಕಾರವನ್ನು ಟೀಕಿಸಿ ಸರಣಿ ವಿಡಿಯೊ ಬಿಡುಗಡೆ ಮಾಡುತ್ತಿರುವ ಅವರು ನಾಲ್ಕನೇ ವಿಡಿಯೊವನ್ನು, ‘ಮೋದಿ ಸರ್ಕಾರ ಭಾರತದ ಆರ್ಥಿಕತೆಯನ್ನು ನಾಶ ಮಾಡಿದ್ದು ಹೇಗೆ’ ಎಂಬ ಶೀರ್ಷಿಕೆಯಡಿ ಬಿಡುಗಡೆ ಮಾಡಿದ್ದಾರೆ.</p>.<p>‘ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಜನರು ದಿನಗೂಲಿ ಅವಲಂಬಿತರಾಗಿದ್ದಾರೆ. ಇವರ ಮೇಲೆ ಸರ್ಕಾರವು ಕೊರೊನಾ ವೈರಸ್ ಲಾಕ್ಡೌನ್ನೊಂದಿಗೆ ಪ್ರಹಾರ ನಡೆಸಿತು’ ಎಂದು ರಾಹುಲ್ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ದೇಶದಲ್ಲಿ ಜಾರಿಗೊಳಿಸಿದ ಹಠಾತ್ ಲಾಕ್ಡೌನ್ ಅಸಂಘಟಿತ ವಲಯದವರಿಗೆ ಮರಣದಂಡನೆಯಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘21 ದಿನಗಳಲ್ಲಿ ಕೊರೊನಾವನ್ನು ಕೊನೆಗಾಣಿಸುವುದಾಗಿ ಭರವಸೆ ನೀಡಲಾಯಿತು. ಆದರೆ, ಈ ನಿರ್ಧಾರವು ಕೋಟ್ಯಂತರ ಉದ್ಯೋಗ, ಸಣ್ಣ ಉದ್ಯಮಗಳನ್ನು ಕೊನೆಗಾಣಿಸಿತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ ಲಾಕ್ಡೌನ್ ಜನವಿರೋಧಿ ಎಂದೂ ಅವರು ಟೀಕಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/rahul-gandhi-says-govt-selling-countrys-assets-shameful-760110.html" itemprop="url">ದೇಶದ ಸ್ವತ್ತುಗಳನ್ನು ಸರ್ಕಾರ ಮಾರಾಟ ಮಾಡುತ್ತಿರೋದು ನಾಚಿಕೆಗೇಡು: ರಾಹುಲ್ ಗಾಂಧಿ</a></p>.<p>ಕೇಂದ್ರದ ಎನ್ಡಿಎ ಸರ್ಕಾರವನ್ನು ಟೀಕಿಸಿ ಸರಣಿ ವಿಡಿಯೊ ಬಿಡುಗಡೆ ಮಾಡುತ್ತಿರುವ ಅವರು ನಾಲ್ಕನೇ ವಿಡಿಯೊವನ್ನು, ‘ಮೋದಿ ಸರ್ಕಾರ ಭಾರತದ ಆರ್ಥಿಕತೆಯನ್ನು ನಾಶ ಮಾಡಿದ್ದು ಹೇಗೆ’ ಎಂಬ ಶೀರ್ಷಿಕೆಯಡಿ ಬಿಡುಗಡೆ ಮಾಡಿದ್ದಾರೆ.</p>.<p>‘ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಜನರು ದಿನಗೂಲಿ ಅವಲಂಬಿತರಾಗಿದ್ದಾರೆ. ಇವರ ಮೇಲೆ ಸರ್ಕಾರವು ಕೊರೊನಾ ವೈರಸ್ ಲಾಕ್ಡೌನ್ನೊಂದಿಗೆ ಪ್ರಹಾರ ನಡೆಸಿತು’ ಎಂದು ರಾಹುಲ್ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>