ನವದೆಹಲಿ: ನಾಗಾಲ್ಯಾಂಡ್ನಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಇದು ಹೃದಯವಿದ್ರಾವಕ ಘಟನೆಯಾಗಿದೆ. ಕೇಂದ್ರ ಸರ್ಕಾರವು ಸರಿಯಾದ ಪ್ರತಿಕ್ರಿಯೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
‘ನಮ್ಮ ನೆಲದಲ್ಲಿ ನಾಗರಿಕರಾಗಲೀ ಭದ್ರತಾ ಸಿಬ್ಬಂದಿಯಾಗಲೀ ಸುರಕ್ಷಿತರಾಗಿಲ್ಲ ಎಂದ ಮೇಲೆ ಗೃಹ ಸಚಿವಾಲಯವು ಏನು ಮಾಡುತ್ತಿದೆ’ ಎಂದು ಅವರು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.