<p><strong>ನವದೆಹಲಿ:</strong> ಸಿಬಿಎಸ್ಇ ವಿವಾದಗಳ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ಪ್ರಧಾನಿಗೆ ಲಕ್ಷಾಂತರ ಮಕ್ಕಳ ಭವಿಷ್ಯದ ಕುರಿತು ಚಿಂತೆ ಇಲ್ಲ, ಸರ್ಕಾರದ ಅಸ್ತಿತ್ವದ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ' ಎಂದು ದೂರಿದ್ದಾರೆ. </p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, 'ದೇಶದ ಯುವಜನರಿಗೆ ಸತ್ಯ ಗೊತ್ತಾಗಬೇಕು. ಈ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ. </p><p>ಸಿಬಿಎಸ್ಇ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೌನವನ್ನು ಪ್ರಶ್ನಿಸಿರುವ ರಾಹುಲ್, 'ಮೊದಲ ದಿನದಿಂದಲೂ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದೇನೆ' ಎಂದು ಹೇಳಿದ್ದಾರೆ. </p><p>'18.5 ಲಕ್ಷ ಮಕ್ಕಳ ಭವಿಷ್ಯವನ್ನು ಹಾಳು ಮಾಡಲಾಗಿದೆ. COEMPT ಕಂಪನಿಗೆ ಗುತ್ತಿಗೆ ನೀಡಿರುವುದರಲ್ಲಿ ಅಕ್ರಮ ನಡೆದಿದೆ' ಎಂದು ರಾಹುಲ್ ಆರೋಪಿಸಿದ್ದಾರೆ. </p>.ಸಿಬಿಎಸ್ಇ | ಧರ್ಮೇಂದ್ರ ಪ್ರಧಾನ್–ರಾಹುಲ್ ಗಾಂಧಿ ನಡುವೆ ಆರೋಪ–ಪ್ರತ್ಯಾರೋಪ.ಸಿಬಿಎಸ್ಇ | ತಪ್ಪೆಸಗಿದ ಕಂಪನಿಗೇಕೆ ಮತ್ತೆ ‘ಒಎಸ್ಎಂ’ ಒಪ್ಪಂದ: ರಾಹುಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಿಬಿಎಸ್ಇ ವಿವಾದಗಳ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ಪ್ರಧಾನಿಗೆ ಲಕ್ಷಾಂತರ ಮಕ್ಕಳ ಭವಿಷ್ಯದ ಕುರಿತು ಚಿಂತೆ ಇಲ್ಲ, ಸರ್ಕಾರದ ಅಸ್ತಿತ್ವದ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ' ಎಂದು ದೂರಿದ್ದಾರೆ. </p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, 'ದೇಶದ ಯುವಜನರಿಗೆ ಸತ್ಯ ಗೊತ್ತಾಗಬೇಕು. ಈ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ. </p><p>ಸಿಬಿಎಸ್ಇ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೌನವನ್ನು ಪ್ರಶ್ನಿಸಿರುವ ರಾಹುಲ್, 'ಮೊದಲ ದಿನದಿಂದಲೂ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದೇನೆ' ಎಂದು ಹೇಳಿದ್ದಾರೆ. </p><p>'18.5 ಲಕ್ಷ ಮಕ್ಕಳ ಭವಿಷ್ಯವನ್ನು ಹಾಳು ಮಾಡಲಾಗಿದೆ. COEMPT ಕಂಪನಿಗೆ ಗುತ್ತಿಗೆ ನೀಡಿರುವುದರಲ್ಲಿ ಅಕ್ರಮ ನಡೆದಿದೆ' ಎಂದು ರಾಹುಲ್ ಆರೋಪಿಸಿದ್ದಾರೆ. </p>.ಸಿಬಿಎಸ್ಇ | ಧರ್ಮೇಂದ್ರ ಪ್ರಧಾನ್–ರಾಹುಲ್ ಗಾಂಧಿ ನಡುವೆ ಆರೋಪ–ಪ್ರತ್ಯಾರೋಪ.ಸಿಬಿಎಸ್ಇ | ತಪ್ಪೆಸಗಿದ ಕಂಪನಿಗೇಕೆ ಮತ್ತೆ ‘ಒಎಸ್ಎಂ’ ಒಪ್ಪಂದ: ರಾಹುಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>