<p><strong>ಜಮುಯಿ/ಬಂಕ</strong>: ‘ಸೇನಾ ಪಡೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸುವ ಮೂಲಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬುಧವಾರ ಆರೋಪಿಸಿದರು.</p>.<p>ಬಿಹಾರದಲ್ಲಿ ಅವರು ಜಮುಯಿ ಮತ್ತು ಬಂಕ ಪ್ರದೇಶಗಳಲ್ಲಿ ಪ್ರಚಾರ ಸಭೆ ನಡೆಸಿದರು.</p>.<p>‘ರಾಹುಲ್ ಗಾಂಧಿ ಅವರಿಗೆ ಏನಾಗಿದೆ? ರಕ್ಷಣಾ ಪಡೆಗಳಲ್ಲಿ ಮೀಸಲಾತಿ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಅವರು ಯತ್ನಿಸುತ್ತಿದ್ದಾರೆ. ನಮ್ಮ ಸೇನೆ ಈ ಎಲ್ಲದಕ್ಕಿಂತ ಮೇಲಿದೆ. ದೇಶ ನಡೆಸುವುದು ಎಂದರೆ ಮಕ್ಕಳ ಆಟವಲ್ಲ ಎಂಬುದನ್ನು ರಾಹುಲ್ ಅರಿಯಬೇಕು’ ಎಂದರು.</p>.<p class="bodytext">ಬಿಹಾರದಲ್ಲಿ ಪ್ರಚಾರ ನಡೆಸುವ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಕೆರೆಗೆ ಹಾರಿ, ಮೀನುಗಾರಿಕೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೆರೆಗೆ ಹಾರುವುದು ಬಿಟ್ಟು ಅವರಿಗೆ ಬೇರೆ ಯಾವ ಆಯ್ಕೆ ಉಳಿದಿದೆ’ ಎಂದರು.</p>.<p>‘ಜಾತಿ, ಧರ್ಮದ ಆಧಾರದಲ್ಲಿ ಎನ್ಡಿಎ ಯಾವತ್ತಿಗೂ ತಾರತಮ್ಯ ಮಾಡುವುದಿಲ್ಲ. ರಾಜ್ಯದಲ್ಲಿ ಎನ್ಡಿಎ ಮೈತ್ರಿಯು ಕೇವಲ ‘ವಿಕಸಿತ’ ಬಿಹಾರಕ್ಕಾಗಿ ಮಾತ್ರ ಕೆಲಸ ಮಾಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮುಯಿ/ಬಂಕ</strong>: ‘ಸೇನಾ ಪಡೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸುವ ಮೂಲಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬುಧವಾರ ಆರೋಪಿಸಿದರು.</p>.<p>ಬಿಹಾರದಲ್ಲಿ ಅವರು ಜಮುಯಿ ಮತ್ತು ಬಂಕ ಪ್ರದೇಶಗಳಲ್ಲಿ ಪ್ರಚಾರ ಸಭೆ ನಡೆಸಿದರು.</p>.<p>‘ರಾಹುಲ್ ಗಾಂಧಿ ಅವರಿಗೆ ಏನಾಗಿದೆ? ರಕ್ಷಣಾ ಪಡೆಗಳಲ್ಲಿ ಮೀಸಲಾತಿ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಅವರು ಯತ್ನಿಸುತ್ತಿದ್ದಾರೆ. ನಮ್ಮ ಸೇನೆ ಈ ಎಲ್ಲದಕ್ಕಿಂತ ಮೇಲಿದೆ. ದೇಶ ನಡೆಸುವುದು ಎಂದರೆ ಮಕ್ಕಳ ಆಟವಲ್ಲ ಎಂಬುದನ್ನು ರಾಹುಲ್ ಅರಿಯಬೇಕು’ ಎಂದರು.</p>.<p class="bodytext">ಬಿಹಾರದಲ್ಲಿ ಪ್ರಚಾರ ನಡೆಸುವ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಕೆರೆಗೆ ಹಾರಿ, ಮೀನುಗಾರಿಕೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೆರೆಗೆ ಹಾರುವುದು ಬಿಟ್ಟು ಅವರಿಗೆ ಬೇರೆ ಯಾವ ಆಯ್ಕೆ ಉಳಿದಿದೆ’ ಎಂದರು.</p>.<p>‘ಜಾತಿ, ಧರ್ಮದ ಆಧಾರದಲ್ಲಿ ಎನ್ಡಿಎ ಯಾವತ್ತಿಗೂ ತಾರತಮ್ಯ ಮಾಡುವುದಿಲ್ಲ. ರಾಜ್ಯದಲ್ಲಿ ಎನ್ಡಿಎ ಮೈತ್ರಿಯು ಕೇವಲ ‘ವಿಕಸಿತ’ ಬಿಹಾರಕ್ಕಾಗಿ ಮಾತ್ರ ಕೆಲಸ ಮಾಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>