ನವದೆಹಲಿ: ‘ಅನೇಕ ಮಾಧ್ಯಮ ಸಹಚರರು ಕೇವಲ ಒಬ್ಬ ವ್ಯಕ್ತಿಯ ಮುಖವನ್ನು ತೋರಿಸುತ್ತಿದ್ದಾರೆ, ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಒಂದು ಸಾರಿಯಾದರೂ ಮಾತನಾಡಿದ್ದಾರೆಯೇ?’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪತ್ರಕರ್ತರಿಗೆ ಕೆಲಸ ಮಾಡಲು ಭಾರತ ಅಪಾಯಕಾರಿ ದೇಶ ಎಂಬ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರುಮಾಧ್ಯಮಗಳ ಕಿವಿ ಹಿಂಡಿದ್ದಾರೆ.
‘ಭಾರತದಲ್ಲಿ ಅನೇಕ ಮಾಧ್ಯಮಗಳು ಒಬ್ಬ ವ್ಯಕ್ತಿಯ ಆರಾಧನೆಯಲ್ಲಿ ತೊಡಗಿಕೊಂಡಿವೆ. ಭಿನ್ನ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ. ಅದನ್ನು ಸಾರ್ವಜನಿಕರಿಗೆ ತಲುಪಲು ಬಿಡುತ್ತಿಲ್ಲ. ಆದರೆ, ಆ ಒಬ್ಬ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಬಂದಿದ್ದಾರೆಯೇ? ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಯವರ ಕುರಿತು ಮಾತನಾಡಿದ್ದಾರೆ.
‘ನಿಮಗೆ ಸರಿ ಅನಿಸಿದ್ದನ್ನು ಮಾಡಿ. ಆದರೆ ನೆನಪಿರಲಿ, ನಿಮ್ಮ ಮೇಲೆ ಅನ್ಯಾಯ, ಹಿಂಸಾಚಾರ ನಡೆದರೆ ನಾನು ನಿಮ್ಮ ಜೊತೆ ಇರುತ್ತೇನೆ. ಹಿಂದೆಯೂ ಇದ್ದೆ, ಮುಂದೆಯೂ ಇರುತ್ತೇನೆ’ ಎಂದು ರಾಹುಲ್ ಗಾಂಧಿ ಭಾನುವಾರ ಟ್ವೀಟ್ ಮಾಡಿದ್ದಾರೆ.
दुखद!
कई मीडिया साथी सिर्फ़ एक व्यक्ति का चेहरा दिखाते हैं, विपक्ष की आवाज़ दबाते हैं- जनता तक नहीं पहुँचने देते। क्या उस व्यक्ति ने कभी आपके लिए आवाज़ उठायी?