<p><strong>ನವದೆಹಲಿ:</strong> ನಿರ್ದಿಷ್ಟ ಆಹಾರೋತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೆರಿಗೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.</p>.<p>ಜಿಎಸ್ಟಿಯನ್ನು ಗೃಹಸ್ಥೀ ಸರ್ವನಾಶ್ ಟ್ಯಾಕ್ಸ್ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.</p>.<p><a href="https://www.prajavani.net/india-news/bjps-swipe-at-opposition-protests-in-parliament-rahul-gandhi-unproductive-politically-956015.html" itemprop="url">ರಾಹುಲ್ ಗಾಂಧಿ ರಾಜಕೀಯವಾಗಿ ಅನುತ್ಪಾದಕರು: ಬಿಜೆಪಿ ಲೇವಡಿ </a></p>.<p>‘ಹಣದುಬ್ಬರದಿಂದ ಬಳಲುತ್ತಿರುವ ಜನರಿಗೆ ‘ಗಬ್ಬರ್’ ಪಾಕವಿಧಾನ ತೋರಿಸಲಾಗಿದೆ. ಕಡಿಮೆ ಮಾಡಿ, ಕಡಿಮೆ ತಿನ್ನಿ, ಸುಳ್ಳುಗಳ ಸರಮಾಲೆಯಿಂದ ಹಸಿವು ನೀಗಿಸಿಕೊಳ್ಳಿ ಎನ್ನಲಾಗುತ್ತಿದೆ. ಮಿತ್ರರ ಮಾತುಗಳಿಗೆ ಕಿವಿಗೊಟ್ಟಿರುವ ಪ್ರಧಾನಿ ಈಗ ಸಾರ್ವಜನಿಕರ ಮಾತನ್ನೂ ಆಲಿಸಿ ಈ ಜಿಎಸ್ಟಿಯನ್ನು ಹಿಂಪಡೆಯಬೇಕಾಗಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಕೆಲವು ಆಹಾರೋತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂಸತ್ನ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದು ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಕಲಾಪಕ್ಕೆ ಅಡ್ಡಿಪಡಿಸಿವೆ. ಪರಿಣಾಮವಾಗಿ ಸೋಮವಾರದಿಂದ ಈವರೆಗೆ ಸಂಸತ್ನ ಉಭಯ ಸದನಗಳಲ್ಲಿ ಸುಗಮ ಕಲಾಪ ನಡೆದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ದಿಷ್ಟ ಆಹಾರೋತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೆರಿಗೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.</p>.<p>ಜಿಎಸ್ಟಿಯನ್ನು ಗೃಹಸ್ಥೀ ಸರ್ವನಾಶ್ ಟ್ಯಾಕ್ಸ್ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.</p>.<p><a href="https://www.prajavani.net/india-news/bjps-swipe-at-opposition-protests-in-parliament-rahul-gandhi-unproductive-politically-956015.html" itemprop="url">ರಾಹುಲ್ ಗಾಂಧಿ ರಾಜಕೀಯವಾಗಿ ಅನುತ್ಪಾದಕರು: ಬಿಜೆಪಿ ಲೇವಡಿ </a></p>.<p>‘ಹಣದುಬ್ಬರದಿಂದ ಬಳಲುತ್ತಿರುವ ಜನರಿಗೆ ‘ಗಬ್ಬರ್’ ಪಾಕವಿಧಾನ ತೋರಿಸಲಾಗಿದೆ. ಕಡಿಮೆ ಮಾಡಿ, ಕಡಿಮೆ ತಿನ್ನಿ, ಸುಳ್ಳುಗಳ ಸರಮಾಲೆಯಿಂದ ಹಸಿವು ನೀಗಿಸಿಕೊಳ್ಳಿ ಎನ್ನಲಾಗುತ್ತಿದೆ. ಮಿತ್ರರ ಮಾತುಗಳಿಗೆ ಕಿವಿಗೊಟ್ಟಿರುವ ಪ್ರಧಾನಿ ಈಗ ಸಾರ್ವಜನಿಕರ ಮಾತನ್ನೂ ಆಲಿಸಿ ಈ ಜಿಎಸ್ಟಿಯನ್ನು ಹಿಂಪಡೆಯಬೇಕಾಗಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಕೆಲವು ಆಹಾರೋತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂಸತ್ನ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದು ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಕಲಾಪಕ್ಕೆ ಅಡ್ಡಿಪಡಿಸಿವೆ. ಪರಿಣಾಮವಾಗಿ ಸೋಮವಾರದಿಂದ ಈವರೆಗೆ ಸಂಸತ್ನ ಉಭಯ ಸದನಗಳಲ್ಲಿ ಸುಗಮ ಕಲಾಪ ನಡೆದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>