<p><strong>ನವದೆಹಲಿ:</strong> ಮುಸ್ಲಿಂ ನಾಯಕರು ತಮ್ಮ ಸಮುದಾಯದ ಸಮಸ್ಯೆಗಳನ್ನು ಗಂಭೀರವಾಗಿ ಎತ್ತಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. </p><p>ಪಕ್ಷದ ಅಲ್ಪಸಂಖ್ಯಾತ ಇಲಾಖೆಯ ಸಲಹಾ ಮಂಡಳಿಯ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಹುಲ್, ಮುಸ್ಲಿಮರ ವಿರುದ್ಧ ಅನ್ಯಾಯವಾದರೆ ಕೇವಲ ಅಲ್ಪಸಂಖ್ಯಾತ ಸದಸ್ಯರಾಗಿ ಅಲ್ಲ ಮುಸ್ಲಿಂ ಆಗಿ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. </p><p>ಅದೇ ರೀತಿ ದಲಿತರು, ಒಬಿಸಿ ಅಥವಾ ಇತರೆ ಸಾಮಾನ್ಯ ವರ್ಗದ ಮೇಲೆ ದಾಳಿ ನಡೆದರೆ ಆ ನಿರ್ದಿಷ್ಟ ಸಮುದಾಯದವರು ಸಮಸ್ಯೆಯನ್ನು ಎತ್ತಬೇಕು ಎಂದು ಒತ್ತಾಯಿಸಿದ್ದಾರೆ. </p><p>ಕಾಂಗ್ರೆಸ್ ಪಕ್ಷವು ಮುಸ್ಲಿಂ ಪದವನ್ನು ಬಳಕೆ ಮಾಡುವುದರಿಂದ ಹಿಂಜರಿಯಬಾರದು ಎಂಬುದು ರಾಹುಲ್ ಗಾಂಧಿ ಅವರ ಸ್ಪಷ್ಟ ಸಂದೇಶವಾಗಿತ್ತು. ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಎಂಬ ಬದಲು ಅಲ್ಪಸಂಖ್ಯಾತರು ಎಂದು ಬಳಕೆ ಮಾಡುತ್ತಿದ್ದಾರೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ. </p><p>ಮತ ಕಳ್ಳತನ ವಿಷಯ ಪ್ರಸ್ತಾಪಿಸಿ ಪಶ್ಚಿಮ ಬಂಗಾಳದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಆದರೆ ಈಗ ಆಂದೋಲನಕ್ಕೆ ಕರೆ ನೀಡಿದ್ದಾರೆ ಎಂದು ಹೇಳಿದ್ದಾರೆ.</p>.ರಾಜೀವ್ ಗಾಂಧಿ ಪುಣ್ಯಸ್ಮರಣೆ: ಅಪ್ಪನ ಕನಸು ನನಸಾಗಿಸಲು ಪಣತೊಟ್ಟ ರಾಹುಲ್ .ಸಂವಿಧಾನ, ಗಾಂಧಿ, ಅಂಬೇಡ್ಕರ್ ಮೇಲೆ ದಾಳಿ ನಡೆಯುತ್ತಿದೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಸ್ಲಿಂ ನಾಯಕರು ತಮ್ಮ ಸಮುದಾಯದ ಸಮಸ್ಯೆಗಳನ್ನು ಗಂಭೀರವಾಗಿ ಎತ್ತಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. </p><p>ಪಕ್ಷದ ಅಲ್ಪಸಂಖ್ಯಾತ ಇಲಾಖೆಯ ಸಲಹಾ ಮಂಡಳಿಯ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಹುಲ್, ಮುಸ್ಲಿಮರ ವಿರುದ್ಧ ಅನ್ಯಾಯವಾದರೆ ಕೇವಲ ಅಲ್ಪಸಂಖ್ಯಾತ ಸದಸ್ಯರಾಗಿ ಅಲ್ಲ ಮುಸ್ಲಿಂ ಆಗಿ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. </p><p>ಅದೇ ರೀತಿ ದಲಿತರು, ಒಬಿಸಿ ಅಥವಾ ಇತರೆ ಸಾಮಾನ್ಯ ವರ್ಗದ ಮೇಲೆ ದಾಳಿ ನಡೆದರೆ ಆ ನಿರ್ದಿಷ್ಟ ಸಮುದಾಯದವರು ಸಮಸ್ಯೆಯನ್ನು ಎತ್ತಬೇಕು ಎಂದು ಒತ್ತಾಯಿಸಿದ್ದಾರೆ. </p><p>ಕಾಂಗ್ರೆಸ್ ಪಕ್ಷವು ಮುಸ್ಲಿಂ ಪದವನ್ನು ಬಳಕೆ ಮಾಡುವುದರಿಂದ ಹಿಂಜರಿಯಬಾರದು ಎಂಬುದು ರಾಹುಲ್ ಗಾಂಧಿ ಅವರ ಸ್ಪಷ್ಟ ಸಂದೇಶವಾಗಿತ್ತು. ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಎಂಬ ಬದಲು ಅಲ್ಪಸಂಖ್ಯಾತರು ಎಂದು ಬಳಕೆ ಮಾಡುತ್ತಿದ್ದಾರೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ. </p><p>ಮತ ಕಳ್ಳತನ ವಿಷಯ ಪ್ರಸ್ತಾಪಿಸಿ ಪಶ್ಚಿಮ ಬಂಗಾಳದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಆದರೆ ಈಗ ಆಂದೋಲನಕ್ಕೆ ಕರೆ ನೀಡಿದ್ದಾರೆ ಎಂದು ಹೇಳಿದ್ದಾರೆ.</p>.ರಾಜೀವ್ ಗಾಂಧಿ ಪುಣ್ಯಸ್ಮರಣೆ: ಅಪ್ಪನ ಕನಸು ನನಸಾಗಿಸಲು ಪಣತೊಟ್ಟ ರಾಹುಲ್ .ಸಂವಿಧಾನ, ಗಾಂಧಿ, ಅಂಬೇಡ್ಕರ್ ಮೇಲೆ ದಾಳಿ ನಡೆಯುತ್ತಿದೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>