<p><strong>ರಾಯ್ಬರೇಲಿ:</strong> ತಮ್ಮ ಲೋಕಸಭಾ ಕ್ಷೇತ್ರ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ಕೈಗೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ಬೆಲೆ ಏರಿಕೆ ಸೇರಿದಂತೆ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದೆ' ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. </p><p>ಚುರುವಾ ಗಡಿಯಲ್ಲಿ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಬಛ್ರಾಂವದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು. </p><p>'ಹಣದುಬ್ಬರ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p><p>ಏತನ್ಮಧ್ಯೆ, ರಾಹುಲ್ ಗಾಂಧಿ ಅವರ ಭೇಟಿಯ ವೇಳೆ ಪಕ್ಷದ ಕೆಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. 'ಸಾರ್ವಜನಿಕರ ತೊಂದರೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವುದು ರಾಹುಲ್ ಗಾಂಧಿ ಅವರ ಕರ್ತವ್ಯವಾಗಿದೆ' ಎಂದು ಬಿಜೆಪಿ ನಾಯಕ ಪ್ರವೇಶ್ ವರ್ಮಾ ಹೇಳಿದ್ದಾರೆ. </p>.ಮಧ್ಯರಾತ್ರಿ ನೂತನ CEC ನೇಮಕ: ಅಗೌರವ ಎಂದ ರಾಹುಲ್ ಗಾಂಧಿ.ನಿಮಗೆ ಅನುಕೂಲವಾಗುವ ಭಾಷೆಯಲ್ಲೇ ಮಾತನಾಡಿ: ಸಂಸದರಿಗೆ ರಾಹುಲ್ ಗಾಂಧಿ ಸಲಹೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ:</strong> ತಮ್ಮ ಲೋಕಸಭಾ ಕ್ಷೇತ್ರ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ಕೈಗೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ಬೆಲೆ ಏರಿಕೆ ಸೇರಿದಂತೆ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದೆ' ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. </p><p>ಚುರುವಾ ಗಡಿಯಲ್ಲಿ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಬಛ್ರಾಂವದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು. </p><p>'ಹಣದುಬ್ಬರ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p><p>ಏತನ್ಮಧ್ಯೆ, ರಾಹುಲ್ ಗಾಂಧಿ ಅವರ ಭೇಟಿಯ ವೇಳೆ ಪಕ್ಷದ ಕೆಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. 'ಸಾರ್ವಜನಿಕರ ತೊಂದರೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವುದು ರಾಹುಲ್ ಗಾಂಧಿ ಅವರ ಕರ್ತವ್ಯವಾಗಿದೆ' ಎಂದು ಬಿಜೆಪಿ ನಾಯಕ ಪ್ರವೇಶ್ ವರ್ಮಾ ಹೇಳಿದ್ದಾರೆ. </p>.ಮಧ್ಯರಾತ್ರಿ ನೂತನ CEC ನೇಮಕ: ಅಗೌರವ ಎಂದ ರಾಹುಲ್ ಗಾಂಧಿ.ನಿಮಗೆ ಅನುಕೂಲವಾಗುವ ಭಾಷೆಯಲ್ಲೇ ಮಾತನಾಡಿ: ಸಂಸದರಿಗೆ ರಾಹುಲ್ ಗಾಂಧಿ ಸಲಹೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>