ಈ ಬಗ್ಗೆ ಪ್ರಧಾನಿ ಅವರಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ‘ಅಭಿವೃದ್ಧಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಹೆಸರಿನಲ್ಲಿ ಹೊಸ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಹೊಸ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಆದರೆ, ಈ ನೀತಿಗಳು ಜನವಿರೋಧಿಯಾಗಿವೆ. ಇದರಿಂದ, ಲಕ್ಷದ್ವೀಪದ ಜನರ ಭವಿಷ್ಯಕ್ಕೆ ಮಾರಕವಾಗಿದೆ. ಸಾರ್ವಜನಿಕರು ಅಥವಾ ಚುನಾಯಿತ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸದೆಯೇ ಆಡಳಿತಾಧಿಕಾರಿ ಏಕಪಕ್ಷೀಯವಾಗಿ ಬದಲಾವಣೆಗಳನ್ನು ಮಾಡಿದ್ದಾರೆ. ಈ ಕ್ರಮಗಳನ್ನು ಲಕ್ಷದ್ವೀಪದ ಜನತೆ ವಿರೋಧಿಸಿದ್ದಾರೆ’ ಎಂದು ವಿವರಿಸಿದ್ದಾರೆ.