ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ತೂರಾಟವಲ್ಲ, ಹಠಾತ್ ಬ್ರೇಕ್‌ನಿಂದ ರಾಹುಲ್ ಕಾರಿನ ಗಾಜು ಜಖಂ: ಕಾಂಗ್ರೆಸ್

Published 31 ಜನವರಿ 2024, 12:22 IST
Last Updated 31 ಜನವರಿ 2024, 12:22 IST
ಅಕ್ಷರ ಗಾತ್ರ

ಮಾಲ್ಡಾ(ಪಶ್ಚಿಮ ಬಂಗಾಳ): ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ರಾಹುಲ್ ಗಾಂಧಿ ಅವರ ಕಾರಿನ ಹಿಂಬದಿ ಗಾಜು ಒಡೆದು ಹೋಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಇದಕ್ಕೂ ಮೊದಲು ಕಿಡಿಗೇಡಿಗಳು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್‌ ಚೌಧರಿ ಆರೋಪಿಸಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ‘ಭಾರತ್ ಜೋಡೊ ನ್ಯಾಯ ಯಾತ್ರೆ ಭಾಗವಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ರಾಹುಲ್ ಗಾಂಧಿ ತೆರಳಿದ್ದು, ರಾಹುಲ್ ಅವರನ್ನು ಭೇಟಿ ಮಾಡಲು ಜನಸಮೂಹವೇ ಸೇರಿತ್ತು. ಈ ವೇಳೆ ಮಹಿಳೆಯೊಬ್ಬರು ಕಾರಿನ ಮುಂಭಾಗಕ್ಕೆ ಬಂದಿದ್ದು, ಹಠಾತ್ ಬ್ರೇಕ್‌ ಹಾಕಬೇಕಾಯಿತು. ಭದ್ರತಾ ವೃತ್ತದೊಳಗೆ ಹಗ್ಗ ಬಳಸಿದ್ದರ ಪರಿಣಾಮ ಕಾರಿನ ಗಾಜು ಒಡೆದಿದೆ’ ಎಂದು ತಿಳಿಸಿದೆ.

‘ಜನ ನಾಯಕ ರಾಹುಲ್ ಗಾಂಧಿ ಜನರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡುತ್ತಿದ್ದಾರೆ. ಅವರಿಗೆ ಜನರ ಸಂಪೂರ್ಣ ಬೆಂಬಲವಿದೆ’ ಎಂದಿದೆ.

ಏನತ್ಮಧ್ಯೆ, ಈ ಘಟನೆಯು ಪಶ್ಚಿಮ ಬಂಗಾಳದಲ್ಲಲ್ಲ, ನೆರೆಯ ಬಿಹಾರದ ಕತಿಹಾರ್ ಪ್ರದೇಶದಲ್ಲಿ ನಡೆದಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT