<p><strong>ಪುರ್ನಿಯಾ(ಬಿಹಾರ):</strong> ‘ಚುನಾವಣೆಯಲ್ಲಿ 160 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್ಡಿಎ ಮೈತ್ರಿಕೂಟವು ಸರ್ಕಾರ ರಚಿಸಲಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರ ‘ಅಂಗಡಿ’ ಮುಚ್ಚಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ರಾಹುಲ್ ಗಾಂಧಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>‘ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್, ಬಿಹಾರದ ಸೀಮಾಂಚಲ ಪ್ರದೇಶವನ್ನು ನುಸುಳುಕೋರರ ತಾಣವನ್ನಾಗಿ ಪರಿವರ್ತಿಸಲು ಪಣ ತೊಟ್ಟಿದ್ದಾರೆ. ಆದರೆ, ನಾವು ಪ್ರತಿಯೊಬ್ಬ ನುಸುಳುಕೋರರನ್ನು ಪತ್ತೆಹಚ್ಚಿ, ಮತದಾರರ ಪಟ್ಟಿಯಿಂದ ಆವರ ಹೆಸರುಗಳನ್ನು ಅಳಿಸಿ ಹಾಕಿ ದೇಶದಿಂದ ಗಡೀಪಾರು ಮಾಡುತ್ತೇವೆ’ ಎಂದಿದ್ದಾರೆ.</p><p>‘ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ನುಸುಳುಕೋರರು ನಿರ್ಧರಿಸಬಾರದು ಎಂದು ನೀವು ಬಯಸಿದರೆ, ಅವರನ್ನು ರಕ್ಷಿಸಲು ಯಾತ್ರೆ ಕೈಗೊಂಡ ಆರ್ಜೆಡಿ–ಕಾಂಗ್ರೆಸ್ ಒಕ್ಕೂಟವನ್ನು ಸೋಲಿಸಿ’ ಎಂದು ಶಾ ಹೇಳಿದ್ದಾರೆ. ಎರಡು ತಿಂಗಳ ಹಿಂದೆ ಆರ್ಜೆಡಿ–ಕಾಂಗ್ರೆಸ್ ಜಂಟಿಯಾಗಿ ರಾಜ್ಯಾದಾದ್ಯಂತ ‘ಮತದಾರರ ಅಧಿಕಾರ ಯಾತ್ರೆ’ ಕೈಗೊಂಡಿದ್ದವು.</p><p>‘ಚುನಾವಣೆಯಲ್ಲಿ ಇಂಡಿಯಾ ಬಣಕ್ಕೆ ಸೋಲು ಖಚಿತವಾಗಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರು ಅಂಗಡಿ ಮುಚ್ಚಲಿದೆ. 243 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ 160 ಸ್ಥಾನಗಳನ್ನು ಗಳಿಸುವ ಮೂಲಕ ಎನ್ಡಿಎ ಸರ್ಕಾರ ರಚಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ</p><p>‘ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತಮ್ಮ ಪುತ್ರರ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ, ಬಿಹಾರದಲ್ಲಿ ಮುಖ್ಯಮಂತ್ರಿ, ದೇಶದಲ್ಲಿ ಪ್ರಧಾನಮಂತ್ರಿ ಹುದ್ದೆ ಖಾಲಿ ಇಲ್ಲ’ ಎಂದು ಲೇವಡಿಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರ್ನಿಯಾ(ಬಿಹಾರ):</strong> ‘ಚುನಾವಣೆಯಲ್ಲಿ 160 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್ಡಿಎ ಮೈತ್ರಿಕೂಟವು ಸರ್ಕಾರ ರಚಿಸಲಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರ ‘ಅಂಗಡಿ’ ಮುಚ್ಚಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ರಾಹುಲ್ ಗಾಂಧಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>‘ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್, ಬಿಹಾರದ ಸೀಮಾಂಚಲ ಪ್ರದೇಶವನ್ನು ನುಸುಳುಕೋರರ ತಾಣವನ್ನಾಗಿ ಪರಿವರ್ತಿಸಲು ಪಣ ತೊಟ್ಟಿದ್ದಾರೆ. ಆದರೆ, ನಾವು ಪ್ರತಿಯೊಬ್ಬ ನುಸುಳುಕೋರರನ್ನು ಪತ್ತೆಹಚ್ಚಿ, ಮತದಾರರ ಪಟ್ಟಿಯಿಂದ ಆವರ ಹೆಸರುಗಳನ್ನು ಅಳಿಸಿ ಹಾಕಿ ದೇಶದಿಂದ ಗಡೀಪಾರು ಮಾಡುತ್ತೇವೆ’ ಎಂದಿದ್ದಾರೆ.</p><p>‘ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ನುಸುಳುಕೋರರು ನಿರ್ಧರಿಸಬಾರದು ಎಂದು ನೀವು ಬಯಸಿದರೆ, ಅವರನ್ನು ರಕ್ಷಿಸಲು ಯಾತ್ರೆ ಕೈಗೊಂಡ ಆರ್ಜೆಡಿ–ಕಾಂಗ್ರೆಸ್ ಒಕ್ಕೂಟವನ್ನು ಸೋಲಿಸಿ’ ಎಂದು ಶಾ ಹೇಳಿದ್ದಾರೆ. ಎರಡು ತಿಂಗಳ ಹಿಂದೆ ಆರ್ಜೆಡಿ–ಕಾಂಗ್ರೆಸ್ ಜಂಟಿಯಾಗಿ ರಾಜ್ಯಾದಾದ್ಯಂತ ‘ಮತದಾರರ ಅಧಿಕಾರ ಯಾತ್ರೆ’ ಕೈಗೊಂಡಿದ್ದವು.</p><p>‘ಚುನಾವಣೆಯಲ್ಲಿ ಇಂಡಿಯಾ ಬಣಕ್ಕೆ ಸೋಲು ಖಚಿತವಾಗಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರು ಅಂಗಡಿ ಮುಚ್ಚಲಿದೆ. 243 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ 160 ಸ್ಥಾನಗಳನ್ನು ಗಳಿಸುವ ಮೂಲಕ ಎನ್ಡಿಎ ಸರ್ಕಾರ ರಚಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ</p><p>‘ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತಮ್ಮ ಪುತ್ರರ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ, ಬಿಹಾರದಲ್ಲಿ ಮುಖ್ಯಮಂತ್ರಿ, ದೇಶದಲ್ಲಿ ಪ್ರಧಾನಮಂತ್ರಿ ಹುದ್ದೆ ಖಾಲಿ ಇಲ್ಲ’ ಎಂದು ಲೇವಡಿಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>